ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ

ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಸದ್ಯ ಸಮಾಜ ಕಲ್ಯಾಣ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿರುವ ಮೀನಾ ಈ ಹುದ್ದೆಯನ್ನು ನಿಭಾಯಿಸಲಿದ್ದಾರೆ. ಲೋಕಾಯುಕ್ತ ಸಂತೋಷ್ ಹೆಗ್ಡೆ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದು, ಇತ್ತೀಚಿಗೆ ಮೋರಿ ಪಾಲಾದ ಬಾಲಕ ಅಭಿಷೇಕ್ ಮುಂತಾದ ವಿಷಯಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳದೆ ಮುಖ್ಯಮಂತ್ರಿಗಳ ಕೆಂಗಣ್ಣಿಗೆ ಸುಬ್ರಮಣ್ಯ ಗುರಿಯಾಗಿದ್ದರು.
ಸರಕಾರ ನನಗೆ ಯಾವುದೇ ಇಲಾಖೆಯ ಜವಾಬ್ದಾರಿಯನ್ನು ನೀಡಿದರೂ ಅದನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದು ಸುಬ್ರಮಣ್ಯ ಹೇಳಿಕೆ ನೀಡಿದ್ದಾರೆ. ಜುಲೈ 31ರ ಒಳಗೆ ಬಿಬಿಎಂಪಿ ಚುನಾವಣೆ ಸಂಬಂಧ ಪ್ರಕ್ರಿಯೆ ಮುಗಿಸಬೇಕೆಂದು ರಾಜ್ಯ ಹೈಕೋರ್ಟ್ ಸರಕಾರಕ್ಕೆ ಆದೇಶ ನೀಡಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications