ಹಾಲು ಕುಡಿದವರು ವಿಷ ಕುಡಿಯುವಂತಾಗಿದೆ : ಈಶ್ವರಪ್ಪ

ಶನಿವಾರ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಸಂಸದ ಬಿ.ವೈ.ರಾಘವೇಂದ್ರ, ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಸೂಡಾ ಅಧ್ಯಕ್ಷ ಜ್ಞಾನೇಶ್ವರ್ರ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಬಿಜೆಪಿಯಲ್ಲಿ ಭಿನ್ನಮತದ ಬಿರುಗಾಳಿ ಎಬ್ಬಿಸಿದ್ದ ಈಶ್ವರಪ್ಪ ಮಾತನಾಡುತ್ತಿದ್ದರು.
ಬಿ.ವೈ.ರಾಘವೇಂದ್ರರವರು ಲೋಕಸಭಾ ಚುನಾವಣೆಯಲ್ಲಿ ಒಬ್ಬ ಹಳೆಯ ಹುಲಿಯನ್ನು ಹೊಡೆದು ಸಂಸತ್ ಪ್ರವೇಶಿಸಿದ್ದಾರೆ. ಸಿಕ್ಕಿರುವ ಸ್ಥಾನ ಪಕ್ಷದ ಕಾರ್ಯಕರ್ತರ ಶ್ರಮದಿಂದ ಸಿಕ್ಕಿದ್ದು, ಮುಂದೆಯೂ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಇನ್ನೂ ಉತ್ತಮ ಸ್ಥಾನ ಪಡೆಯಬೇಕು. ಚುನಾವಣಾ ಸಂದರ್ಭದಲ್ಲಿಯೇ ಹೇಳಿದ್ದೆ. ನನ್ನ ಮಗನಂತೆಯೇ ರಾಘವೇಂದ್ರ ಕೂಡ ನನ್ನ ಎರಡನೇ ಮಗ ಎಂದು ಹೇಳಿದರು.
ಬಿಜೆಪಿಯಲ್ಲಿ ಸಣ್ಣ ಪ್ರಮಾಣದ ಬಿಕ್ಕಟ್ಟು ಸೃಷ್ಟಿಯಾಗಿತ್ತು, ಅದೀಗ ಬಗೆಹರಿದಿದೆ. ಬಿಜೆಪಿಯಲ್ಲಿ ಏನೇ ಚರ್ಚೆಯಾದರು ನಾಲ್ಕು ಗೋಡೆಗಳ ಮಧ್ಯೆ ನಡೆಯುತ್ತಿತ್ತು. ಆದರೆ ಈ ಬಾರಿ ಮಾಧ್ಯಮದ ಮುಖಾಂತರ ಹೊರಜಗತ್ತಿಗೆ ತಿಳಿಯುವಂತಾಗಿದೆ. ಇದೇ ಬಿಕ್ಕಟ್ಟು ಬೇರೆ ಪಕ್ಷದಲ್ಲಿ ಉಂಟಾಗಿದ್ದರೆ ಹೊಡೆದಾಡುವ ಮಟ್ಟಕ್ಕೆ ಹೋಗುತ್ತಿತ್ತು. ಆದರೆ ನಮ್ಮ ಪಕ್ಷದಲ್ಲಿ ಈ ರೀತಿಯ ಘಟನೆ ನಡೆಯುವುದಿಲ್ಲ ಎಂದರು. ಉಂಟಾಗಿದ್ದ ಗೊಂದಲ ಬಗೆಹರಿದಿದ್ದು, ಮುಂದಿನ ನಾಲ್ಕು ವರ್ಷಗಳ ಕಾಲ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಜೊತೆಗೆ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿದ್ದು, ಆ ಸಾಧನೆಯನ್ನು ಯಡಿಯೂರಪ್ಪ ಮಾಡಿತೋರಿಸುತ್ತಾರೆ ಎಂದು ಹೆಮ್ಮೆಯಿಂದ ನುಡಿದರು.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ತಪ್ಪು ಅಭಿಪ್ರಾಯ ಸೃಷ್ಟಿಯಾಗಿದೆ. ಆದರೆ 20 ವರ್ಷಗಳಲ್ಲಿ ಹಣ, ಹೆಂಡ ಹಂಚದೆ ಮತಪಡೆದಿದ್ದೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಪಡೆದ ಮತಕ್ಕಿಂತ ನಗರ ಪ್ರದೇಶದಲ್ಲಿ ರಾಘವೇಂದ್ರರವರಿಗೆ ಬಂದಿದೆ ಎಂದು ಹರ್ಷಿಸಿದರು.
ರಾಜ್ಯದ ಯಾವುದೇ ನಗರಕ್ಕೂ ಬಿಡುಗಡೆಯಾಗದಷ್ಟು ಹಣ ಜಿಲ್ಲೆಗೆ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಹಣವನ್ನು ಸರಿಯಾಗಿ ಅಭಿವೃದ್ಧಿ ಕಾರ್ಯಕ್ಕೆ ಬಳಸಬೇಕೆಂದು ನಗರಸಭಾ ಅಧ್ಯಕ್ಷರಿಗೆ ಈಶ್ವರಪ್ಪ ಸೂಚಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications