ಹಾಲು ಕುಡಿದವರು ವಿಷ ಕುಡಿಯುವಂತಾಗಿದೆ : ಈಶ್ವರಪ್ಪ

ಶನಿವಾರ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಸಂಸದ ಬಿ.ವೈ.ರಾಘವೇಂದ್ರ, ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಸೂಡಾ ಅಧ್ಯಕ್ಷ ಜ್ಞಾನೇಶ್ವರ್ರ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಬಿಜೆಪಿಯಲ್ಲಿ ಭಿನ್ನಮತದ ಬಿರುಗಾಳಿ ಎಬ್ಬಿಸಿದ್ದ ಈಶ್ವರಪ್ಪ ಮಾತನಾಡುತ್ತಿದ್ದರು.
ಬಿ.ವೈ.ರಾಘವೇಂದ್ರರವರು ಲೋಕಸಭಾ ಚುನಾವಣೆಯಲ್ಲಿ ಒಬ್ಬ ಹಳೆಯ ಹುಲಿಯನ್ನು ಹೊಡೆದು ಸಂಸತ್ ಪ್ರವೇಶಿಸಿದ್ದಾರೆ. ಸಿಕ್ಕಿರುವ ಸ್ಥಾನ ಪಕ್ಷದ ಕಾರ್ಯಕರ್ತರ ಶ್ರಮದಿಂದ ಸಿಕ್ಕಿದ್ದು, ಮುಂದೆಯೂ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಇನ್ನೂ ಉತ್ತಮ ಸ್ಥಾನ ಪಡೆಯಬೇಕು. ಚುನಾವಣಾ ಸಂದರ್ಭದಲ್ಲಿಯೇ ಹೇಳಿದ್ದೆ. ನನ್ನ ಮಗನಂತೆಯೇ ರಾಘವೇಂದ್ರ ಕೂಡ ನನ್ನ ಎರಡನೇ ಮಗ ಎಂದು ಹೇಳಿದರು.
ಬಿಜೆಪಿಯಲ್ಲಿ ಸಣ್ಣ ಪ್ರಮಾಣದ ಬಿಕ್ಕಟ್ಟು ಸೃಷ್ಟಿಯಾಗಿತ್ತು, ಅದೀಗ ಬಗೆಹರಿದಿದೆ. ಬಿಜೆಪಿಯಲ್ಲಿ ಏನೇ ಚರ್ಚೆಯಾದರು ನಾಲ್ಕು ಗೋಡೆಗಳ ಮಧ್ಯೆ ನಡೆಯುತ್ತಿತ್ತು. ಆದರೆ ಈ ಬಾರಿ ಮಾಧ್ಯಮದ ಮುಖಾಂತರ ಹೊರಜಗತ್ತಿಗೆ ತಿಳಿಯುವಂತಾಗಿದೆ. ಇದೇ ಬಿಕ್ಕಟ್ಟು ಬೇರೆ ಪಕ್ಷದಲ್ಲಿ ಉಂಟಾಗಿದ್ದರೆ ಹೊಡೆದಾಡುವ ಮಟ್ಟಕ್ಕೆ ಹೋಗುತ್ತಿತ್ತು. ಆದರೆ ನಮ್ಮ ಪಕ್ಷದಲ್ಲಿ ಈ ರೀತಿಯ ಘಟನೆ ನಡೆಯುವುದಿಲ್ಲ ಎಂದರು. ಉಂಟಾಗಿದ್ದ ಗೊಂದಲ ಬಗೆಹರಿದಿದ್ದು, ಮುಂದಿನ ನಾಲ್ಕು ವರ್ಷಗಳ ಕಾಲ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಜೊತೆಗೆ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿದ್ದು, ಆ ಸಾಧನೆಯನ್ನು ಯಡಿಯೂರಪ್ಪ ಮಾಡಿತೋರಿಸುತ್ತಾರೆ ಎಂದು ಹೆಮ್ಮೆಯಿಂದ ನುಡಿದರು.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ತಪ್ಪು ಅಭಿಪ್ರಾಯ ಸೃಷ್ಟಿಯಾಗಿದೆ. ಆದರೆ 20 ವರ್ಷಗಳಲ್ಲಿ ಹಣ, ಹೆಂಡ ಹಂಚದೆ ಮತಪಡೆದಿದ್ದೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಪಡೆದ ಮತಕ್ಕಿಂತ ನಗರ ಪ್ರದೇಶದಲ್ಲಿ ರಾಘವೇಂದ್ರರವರಿಗೆ ಬಂದಿದೆ ಎಂದು ಹರ್ಷಿಸಿದರು.
ರಾಜ್ಯದ ಯಾವುದೇ ನಗರಕ್ಕೂ ಬಿಡುಗಡೆಯಾಗದಷ್ಟು ಹಣ ಜಿಲ್ಲೆಗೆ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಹಣವನ್ನು ಸರಿಯಾಗಿ ಅಭಿವೃದ್ಧಿ ಕಾರ್ಯಕ್ಕೆ ಬಳಸಬೇಕೆಂದು ನಗರಸಭಾ ಅಧ್ಯಕ್ಷರಿಗೆ ಈಶ್ವರಪ್ಪ ಸೂಚಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications