ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಶಾಲೆ ದತ್ತು ಪಡೆಯಲು ಕರವೇ ಕಂಕಣ

By Staff
|
Google Oneindia Kannada News

ಬೆಂಗಳೂರು, ಜೂ.13: ಕನ್ನಡಿಗರು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿನ ಸರಕಾರಿ ಕನ್ನಡ ಶಾಲೆಗಳನ್ನು ದತ್ತು ಪಡೆಯುವ ಯೋಜನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ 43ನೇ ಜನ್ಮದಿನಚಾರಣೆಯಂದು ಕನ್ನಡ ಶಾಲೆಗಳನ್ನು ದತ್ತು ಪಡೆದು ಹೈಟೆಕ್ ಮಾದರಿ ಶಾಲೆಗಳನ್ನಾಗಿ ಮಾಡುವ ದೀಕ್ಷೆಯನ್ನು ಕಾರ್ಯಕರ್ತರು ತೊಟ್ಟಿದ್ದಾರೆ.

ಬೆಳಗಾವಿ, ರಾಯಚೂರು, ಗುಲ್ಬರ್ಗ, ಬೀದರ್, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರದ ಶ್ರೀರಾಂಪುರ, ಹಲಸೂರು ಮತ್ತು ಡಿ ಜಿ ಹಳ್ಳಿ ಮುಂತಾದ ಕಡೆ ಕನ್ನಡಿಗರು ಹೆಚ್ಚಾಗಿ ವಾಸಿಸುವ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು. ಈ ಮೂಲಕ ನಾರಾಯಣ ಗೌಡರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ನಗರ ಜಿಲ್ಲೆಯ ಕಾರ್ಯಕರ್ತರು ನಿರ್ಧರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X