ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಿನ್ಹಾ ರಾಜೀನಾಮೆ

ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಅಧಿಕಾರದಲ್ಲಿದ್ದಾಗ ಯಶವಂತ ಸಿನ್ಹಾ ಅವರು ವಿದೇಶಾಂಗ ಮತ್ತು ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ರಾಜೀನಾಮೆಯಿಂದ ಕೇಂದ್ರ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಬೀತಾಗಿದೆ. ಹಜಾರಿಬಾಗ್ ಕ್ಷೇತ್ರದಿಂದ ಈ ಬಾರಿಯ ಲೋಕಸಭೆಗೆ ಸಿನ್ಹಾ ಆಯ್ಕೆಯಾಗಿದ್ದರು.
ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಪತ್ರಿಕಾಗೋಷ್ಠಿಗೂ ಕೆಲ ನಿಮಿಷಗಳ ಮುನ್ನ ಈ ಮಹತ್ವದ ಬೆಳವಣಿಗೆ ನಡೆಯಿತು. ನಂತರ ರಾಜ್ ನಾಥ್ ಸಿಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗ ಪಡಿಸಿದ್ದು ಸರಿಯಲ್ಲ. ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದರು.
ಬಹಿರಂಗ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆಯನ್ನು ನಡೆಸಲಿದ್ದೇವೆ. ಆಗಸ್ಟ್ ನಲ್ಲಿ ಚಿಂತನಾ ಸಭೆ ನಡೆಸಲಿದ್ದೇವೆ ಎಂದು ರಾಜ್ ನಾಥ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
(ಏಜೆನ್ಸೀಸ್)












Click it and Unblock the Notifications