ಹಿಂದುತ್ವ ಕೈಬಿಡಿ : ಬಿಜೆಪಿಗೆ ವೈದ್ಯ ಕಿವಿಮಾತು
ನಾಗ್ಪುರ್, ಜೂ. 15 : ಹಿಂದುತ್ವ ನೀತಿಯ ಅಸ್ಥಿರತೆಗಾಗಿ ಬಿಜೆಪಿಯನ್ನು ಟೀಕಿಸಿದ ಹಿರಿಯ ಆರ್ಎಸ್ಎಸ್ ಚಿಂತಕ ಎಂ ಜಿ ಅಲಿಯಾಸ್ ಬಾಬುರಾವ್ ವೈದ್ಯ, ಜನಸಾಮಾನ್ಯರನ್ನು ಸೆಳೆಯುವಲ್ಲಿ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ಇನ್ನಾದರೂ ಹಿಂದುತ್ವದ ಸಿದ್ಧಾತದಿಂದ ಹಿಂದೆ ಸರಿಯುವುದು ಲೇಸೆಂದು ಹೇಳಿದ್ದಾರೆ.
ಮರಾಠಿ ಪತ್ರಿಕೆ ಅಂಕಣಕಾರರಾಗಿರುವ ವೈದ್ಯ ತಮ್ಮ ಲೇಖನದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಾ, ಹಿಂದೆ ಜನ ಸಂಘವೆಂದು ಕರೆಯಲ್ಪಡುತ್ತಿದ್ದ ಪಕ್ಷ ಬಳಿಕ ಬಿಜೆಪಿಯಾಯಿತು. ಗಾಂಧಿ ಪ್ರಣೀತ ಸಮಾಜವಾದವನ್ನು ಒಪ್ಪಿಕೊಂಡರೂ ಬಿಜೆಪಿಗೆ ಅಂಟಿದ ಕೋಮುವಾದಿ ಪಕ್ಷವೆಂಬ ಹಣೆಪಟ್ಟಿ ಮಾತ್ರ ದೂರವಾಗಿಲ್ಲ ಎಂದಿದ್ದಾರೆ. 1984ರ ಚುನಾವಣೆಯ ಬಳಿಕ ಬಿಜೆಪಿ ಮತ್ತೆ ಹಿಂದುತ್ವದ ಮಂತ್ರಿ ಜಪಿಸತೊಡಗಿತು. ಬಿಜೆಪಿ ಎಷ್ಟೇ ಹರಸಾಹಸಪಟ್ಟರೂ ಅಧಿಕಾರ ಸೂತ್ರ ಹಿಡಿಯುವುದು ಅದರಿಂದ ಸಾಧ್ಯವಾಗಲಿಲ್ಲ. ಪರಿಣಾಮವಾಗಿ ಪಕ್ಷ ದ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡರು. ಹಿಂದುತ್ವ ಕ್ರಮೇಣ ಅವರಿಗೆ ಮರೆತುಹೋಯಿತು ಎಂದು ಆರ್ಎಸ್ಎಸ್ ಮಾಜಿ ವಕ್ತಾರ ಅಭಿಪ್ರಾಯಪಟ್ಟಿದ್ದಾರೆ.
1999ರಲ್ಲಿ ಬಿಜೆಪಿ ಗೆದ್ದು ಅಧಿಕಾರ ಸೂತ್ರ ಹಿಡಿಯುತು. ಅದು 2004 ರಲ್ಲಿ ಮತ್ತೆ ಸೋತಿತು. ಆಗ ಪಕ್ಷಕ್ಕೆ ಮತ್ತೆ ಹಿಂದುತ್ವ ನೆನಪಾಯಿತು. ಕಳೆದ ಲೋಕಸಭೆ ಚುನಾವಣೆಯ ಪಕ್ಷದ ಪ್ರಣಾಳಿಕೆಯಲ್ಲಿ ಬಿಜೆಪಿ ಹಿಂದುತ್ವದ ಬಗ್ಗೆ ಹೇಳಿಕೊಂಡಿತ್ತು. ಆದರೆ, ಜನಸಾಮಾನ್ಯರನ್ನು ತನ್ನತ್ತ ಸೆಳೆದುಕೊಳ್ಳುವಲ್ಲಿ ವಿಫಲವಾಯಿತು ಎಂದ ವೈದ್ಯ, ಹಿಂದುತ್ವದ ನಿಜವಾದ ಅರ್ಥವೇನು ಎನ್ನುವುದನ್ನು ಜನರಿಗೆ ತಿಳಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದಿದ್ದಾರೆ.
(ಏಜನ್ಸೀಸ್)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications