ಶಿವಮೊಗ್ಗದಲ್ಲಿ ಚಿಕುನ್ಗುನ್ಯಾ : 8 ಪ್ರಕರಣಗಳು ಪತ್ತೆ
ಶಿವಮೊಗ್ಗ, ಜೂ. 15 : ನೂತನ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಜಿ. ಕುಮಾರಸ್ವಾಮಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ತಿಪ್ಪೇಶಿರವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಕೊಮ್ಮನಾಳು, ಸೋಮಿನಕೊಪ್ಪ, ಹಾಡೋನಹಳ್ಳಿ ಹಾಗೂ ಬನ್ನಿಕೆರೆ ಗ್ರಾಮಗಳಿಗೆ ಭೇಟಿ ನೀಡಿ ಚಿಕುನ್ ಗುನ್ಯಾ ಕಾಯಿಲೆಗೆ ಸಂಬಂಧಿಸಿದಂತೆ ಚರ್ಚಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 360 ಜ್ವರದ ಪ್ರಕರಣಗಳು ಪತ್ತೆಯಾಗಿದ್ದು, ಸೊಳ್ಳೆಗಳಿಂದ ಮತ್ತೆ ಚಿಗಿತುಕೊಂಡಿರುವ ಚಿಕುನ್ ಗುನ್ಯಾ ಕಾಯಿಲೆಯಿಂದ ಸಾಕಷ್ಟು ರೋಗಿಗಳು ತೀವ್ರತರದ ಯಾತನೆಯನ್ನು ಅನುಭವಿಸುವಂತಾಗಿದೆ.
ಈ ಜ್ವರದ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳನ್ನು ಚಿಕಿತ್ಸೆಗೊಳಪಡಿಸಿ ಸೂಕ್ತ ಔಷಧೋಪಚಾರ ಮಾಡಲಾಗುತ್ತಿದೆ. ಇದರೊಂದಿಗೆ 8 ಪ್ರಕರಣಗಳು ಮಾತ್ರ ಪತ್ತೆ ಹಚ್ಚಲಾಗಿದ್ದು, ಚಿಕುನ್ ಗುನ್ಯಾ ಶಿವಮೊಗ್ಗದಲ್ಲಿ ಹಬ್ಬದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ತಿಪ್ಪೇಶಿ ತಿಳಿಸಿದ್ದಾರೆ.
ಈ ತಂಡದಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಹೆಚ್.ಸಿ. ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications