ರಾಜಕೀಯದಿಂದ ನಿವೃತ್ತಿ ಇಲ್ಲ : ಬಂಗಾರಪ್ಪ

ರಾಷ್ಟ್ರರಾಜಕಾರಣ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಇದಕ್ಕೆ ಸಾಕ್ಷಿ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ತನ್ನ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ಉತ್ತರಪ್ರದೇಶ ಮತ್ತು ಬಿಹಾರ್ ರಾಜ್ಯಗಳಲ್ಲಿ ನಮ್ಮ ಪಕ್ಷ ಉತ್ತಮ ಮುನ್ನಡೆ ಸಾಧಿಸಿದೆ ಎಂದರು.
ಬೇರೆ ಪಕ್ಷಗಳ ಜೊತೆ ನಾವು ಚುನಾವಣಾಪೂರ್ವ ಹೊಂದಾಣಿಕೆ ಮಾಡಿಕೊಂಡು ನಮ್ಮ ಪಕ್ಷ ನಂಬಿಕೆ ರಾಜಕಾರಣಕ್ಕೆ ಪಾತ್ರವಾಗಿದೆ. ದೇಶದ ಪ್ರಮುಖ ರಾಜ್ಯಗಳಾದ ಉತ್ತರಪ್ರದೇಶ ಮತ್ತು ಬಿಹಾರ್ ನಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಬಿಜೆಪಿಯಲ್ಲಿ ಭಿನ್ನಮತ ಕಾಣುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಎರಡರಲ್ಲೂ ಬಿಜೆಪಿ ಒಡೆದು ಹೋಳಾಗಲಿದೆ ಎಂದು ಭವಿಷ್ಯ ನುಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications