ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು

Sri Ramulu
ಬಳ್ಳಾರಿ, ಜೂ. 15 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಬಾವುಟ ಹಾರಿಸಿರುವ ಬಳ್ಳಾರಿ ಸಚಿವತ್ರಯರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಭಿನ್ನಮತವೇ ಇಲ್ಲದಿರುವಾಗ ಅರುಣ್ ಜೈಟ್ಲಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ರೆಡ್ಡಿ ಸಹೋದರರು ಹಾಗೂ ನಾನು ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಗೆ ವಜ್ರ ಖಚಿತ ಕಿರೀಟ ಸಮರ್ಪಿಸುವ ಸಮಾರಂಭದಲ್ಲಿ ಪಾಲ್ಗೊಂಡಿದ್ದರಿಂದ ಆ ದಿನ ನಡೆದ ಸಚಿವ ಸಂಪುಟಕ್ಕೆ ಬರಲು ಆಗಲಿಲ್ಲ. ಈ ಬಗ್ಗೆ ತಾವು ಮುಖ್ಯಮಂತ್ರಿಯವರಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಶ್ರೀರಾಮುಲು ಹೇಳಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಐದು ವರ್ಷ ಆಡಳಿತ ಪೂರ್ಣಗೊಳಿಸಲಿದೆ. ಯಡಿಯೂರಪ್ಪ, ಅನಂತಕುಮಾರ್, ಈಶ್ವರಪ್ಪ ಹಾಗೂ ಜನಾರ್ದನರೆಡ್ಡಿ ಸೇರಿದಂತೆ ಪಕ್ಷದ ಹಿರಿಯರೆಲ್ಲ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನೆಡಸುತ್ತಾರೆ. ಐದು ವರ್ಷಗಳ ನಂತರವೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+