ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ರೆಡ್ಡಿ ಸಹೋದರರು ಹಾಗೂ ನಾನು ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಗೆ ವಜ್ರ ಖಚಿತ ಕಿರೀಟ ಸಮರ್ಪಿಸುವ ಸಮಾರಂಭದಲ್ಲಿ ಪಾಲ್ಗೊಂಡಿದ್ದರಿಂದ ಆ ದಿನ ನಡೆದ ಸಚಿವ ಸಂಪುಟಕ್ಕೆ ಬರಲು ಆಗಲಿಲ್ಲ. ಈ ಬಗ್ಗೆ ತಾವು ಮುಖ್ಯಮಂತ್ರಿಯವರಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಶ್ರೀರಾಮುಲು ಹೇಳಿದರು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಐದು ವರ್ಷ ಆಡಳಿತ ಪೂರ್ಣಗೊಳಿಸಲಿದೆ. ಯಡಿಯೂರಪ್ಪ, ಅನಂತಕುಮಾರ್, ಈಶ್ವರಪ್ಪ ಹಾಗೂ ಜನಾರ್ದನರೆಡ್ಡಿ ಸೇರಿದಂತೆ ಪಕ್ಷದ ಹಿರಿಯರೆಲ್ಲ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನೆಡಸುತ್ತಾರೆ. ಐದು ವರ್ಷಗಳ ನಂತರವೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications