ನಂಜುಂಡಪ್ಪ ಸಮಿತಿಗೆ 2578 ಕೋಟಿ ರೂ. ಬಿಡುಗಡೆ
ಗುಲ್ಬರ್ಗಾ,ಜೂ. 16 : ಕರ್ನಾಟಕ ರಾಜ್ಯದ 114 ಹಿಂದುಳಿದ ತಾಲೂಕಗಳಲ್ಲಿ ವಿವಿಧ ಅಭವೃದ್ದಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಡಾ ನಂಜುಂಡಪ್ಪ ವರದಿ ಸಮಿತಿಯ ಮೂಲಕ ಪ್ರಸಕ್ತ ವರ್ಷ ರಾಜ್ಯ ಸರ್ಕಾರ 19 ಇಲಾಖೆಗಳಿಗೆ 2578 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಡಾ ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಶಶಿಲ ಜಿ.ನಮೋಶಿ ಅವರು ಹೇಳಿದರು.
ಅವರು ಸೋಮವಾರ ಗುಲಬರ್ಗಾದಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಸಹ ಭಾಗಿತ್ವದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಘಟಕದಿಂದ "ಹೈದ್ರಾಬಾದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ಆಚಾರ, ವಿಚಾರ, ಪ್ರಚಾರ " ಕುರಿತು ಆಯೋಜಿಸಿದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ 19 ಇಲಾಖೆಗಳಿಗೆ ವಾರ್ಷಿಕವಾಗಿ ನಿಗದಿ ಪಡಿಸಿದ ಅನುದಾನ ಹೊರಪಡಿಸಿ ಈ ಹಣ ನೀಡಲಾಗಿದೆ ಎಂದರು.
ಹೈದ್ರಾಬಾದ ಕರ್ನಾಟಕ ಪ್ರದೇಶವು ಹಲವಾರು ಪ್ರವಾಸಿ ತಾಣಗಳನ್ನು ಹೊಂದಿದ್ದು, ಈ ತಾಣಗಳಲ್ಲಿ ಸಮರ್ಪಕ ರಸ್ತೆ,ಕುಡಿಯುವ ನೀರು ,ವಸತಿ ಮುಂತಾದ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಆಕರ್ಷಕವಾಗಿ ಕಾಣುವ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಕೊಳ್ಳಲು ಬೇಡಿಕೆ ಆಧಾರಿತ ಕ್ರಿಯಾ ಯೊಜನೆ ರೂಪಿಸಿ ಡಾ ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಗೆ ಸಲ್ಲಿಸಿದರೆ ಈ ಭಾಗದ ಪ್ರವಾಸೋದ್ಯಮ ಅಭಿವೃದ್ದಿಗೂ ಹೆಚ್ಚಿನ ಹಣ ಒದಗಿಸಲು ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸ್ತುತ ಕಾರ್ಯಗಾರ ಚಿಂತನ- ಮಂಥನ ನಡೆಸಿ ಯೋಜನೆ ರೂಪಿಸಬೇಕೆಂದು ಸಲಹೆ ನೀಡಿದರು.
ಜೈಪೂರಿನ ಭಾರತೀಯ ಅಂತರ ರಾಷ್ಟ್ರೀಯ ಸಮಾಜ ವಿಜ್ಞಾನ ಸಂಸ್ಥೆ ಮತ್ತು ಪ್ರವಾಸೋದ್ಯಮ ನಿರ್ದೇಶಕ ಪ್ರೊ ಈಶ್ವರ ಮೋದಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ಪ್ರವಾಸೋದ್ಯಮವು ಪ್ರಪಂಚದ ದೊಡ್ಡ ಉದ್ಯಮವಾಗಿದ್ದು, ಈ ಉದ್ಯಮದಲ್ಲಿ ಅವಕಾಶಗಳು ಹೆಚ್ಚಾಗಬೇಕು . ಭಾರತದಲ್ಲಿ ಪ್ರವಾಸೋದ್ಯಮವು ಹೆಚ್ಚು ಮಹತ್ವ ಪಡೆದಿದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications