ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್

By Staff
|
Google Oneindia Kannada News

Manmohan Singh
ಯಕೇಟರೀನ್ ಬರ್ಗ್ (ರಷ್ಯಾ), ಜೂ. 16 : ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಧಮನ ಮಾಡಬೇಕಾದ ಕೆಲಸ ಅತ್ಯಂತ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಕಿಸ್ತಾನವನ್ನು ಒತ್ತಾಯಿಸುವ ಮೂಲಕ ಉಗ್ರರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸಿದೆ.

ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ ಕೈಗೊಂಡಿರುವ ಸಿಂಗ್, ರಷ್ಯಾದಲ್ಲಿ ನಡೆಯುತ್ತಿರುವ ಆರು ರಾಷ್ಟ್ರಗಳ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ತೆರಳಿದ್ದ ಸಮಯದಲ್ಲಿ ಪಾಕಿಸ್ತಾನದ ಪ್ರಧಾನಿ ಆಸೀಫ್ ಅಲಿ ಜರ್ದಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪಾಕ್ ನಲ್ಲಿಬೀಡುಬಿಟ್ಟಿರುವ ಉಗ್ರರ ಜಾಲವನ್ನು ನಾಶಪಡಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿರುವ ಪ್ರಧಾನಿ ಅವರು, ಭಯೋತ್ಪಾದಕರ ಬಗ್ಗೆ ಪಾಕಿಸ್ತಾನ ಮೃದುಧೋರಣೆ ತಾಳಿರುವುದು ಅತ್ಯಂತ ಅತ್ಯಂತ ಅಸಮಾಧಾನ ತರುವಂತ ಸಂಗತಿಯಾಗಿದೆ ಎಂದು ನೇರವಾಗಿ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್ ನಲ್ಲಿ ಭಾರತದ ಮುಂಬೈನಲ್ಲಿ ನಡೆದ ಭಯೋತ್ಪಾದನೆ ಸಂಬಂಧಿಸಿದಂತೆ ನೇರ ಕೈವಾಜ ಹೊಂದಿರುವ ಜಮಾತೆ ಉದ್ ದವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯ್ಯದ್ ನನ್ನು ಬಿಡುಗಡೆಗೊಳಿಸಿರುವುದಕ್ಕೆ ಭಾರತಕ್ಕೆ ತೀವ್ರ ನಿರಾಶೆ ಉಂಟು ಮಾಡಿದೆ ಎಂದ ಸಿಂಗ್, ಮುಂಬೈ ದಾಳಿಗೆ ಸಂಬಂಧಿಸಿದಂತೆ ಭಾರತ ಎಲ್ಲ ಸಾಕ್ಷ್ಯಾಧಾರಗಳನ್ನು ಒದಗಿಸಿದರೂ ಪಾಕಿಸ್ತಾನ ಯಾವ ಕ್ರಮಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X