ಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಜಾಗೊಳಿಸಿರುವ ಪ್ರಕರಣಕ್ಕೆ ಹೆಚ್ಚಿನ ಮಹತ್ವವಿಲ್ಲ ಎಂದರು. ಅಡ್ವೋಕೇಟ್ ಜನರಲ್ ಆಗಿದ್ದ ಉದಯ್ ಹೊಳ್ಳ ಅವರ ರಾಜೀನಾಮೆ ಸಂಬಂಧಿಸಿದಂತೆ ಮಾತನಾಡಿದ ಯಡಿಯೂರಪ್ಪ, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವರ್ತೂರು ಪ್ರಕಾಶ ಅವರನ್ನು ಮಂಡಳಿಯಿಂದ ತೆಗೆದು ಹಾಕಿದ್ದಕ್ಕೆ ಕೋಲಾರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ವರ್ತೂರು ಪ್ರಕಾಶ ಬಿಜೆಪಿ ಪರವಾಗಿ ಕೆಲಸ ಮಾಡಲಿಲ್ಲ ಹಾಗೂ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರ ಮೇಲೆ ಪದೆಪದೇ ವೈಯಕ್ತಿಕ ದಾಳಿ ನಡೆಸಿರುವುದು ಬಿಜೆಪಿ ನಾಯಕರಿಗೆ ಇರಿಸುಮುರಿಸು ಉಂಟಾಗಿತ್ತು. ಶ್ರುತಿ ಅವರು ಅವರ ಪತಿ ನಿರ್ದೇಶ ಕ ಮಹೇಂದರ್ ಅವರಿಗೆ ವಿಚ್ಚೇದನ ನೀಡಿ ರಾದ್ಧಾಂತ ಮಾಡಿಕೊಂಡಿದ್ದು ಅವರನ್ನು ವಜಾಗೊಳಿಸಲು ಕಾರಣಗಳು ಎನ್ನುವ ಸುದ್ದಿ ಬಿಜೆಪಿ ವಲಯದಿಂದ ಕೇಳಿ ಬಂದಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications