ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್

ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ ಪಾರಂಪರಿಕ ವೃತ್ತಗಳು, ನಗರದ ಸೌಂದರ್ಯಕ್ಕೆ ಪ್ರತೀಕವಾಗಿದೆ. ಮೈಸೂರು ನಗರದ ಸೌಂದರ್ಯ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ.
ಮೈಸೂರು ನಗರದ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳನ್ನು ಬೀದಿ ದೀಪದ ಕಂಬಗಳು, ವೃತ್ತಗಳು, ಪಾರಂಪರಿಕ ವಲಯಗಳಲ್ಲಿ ಅಳವಡಿಸುತ್ತಿರುವುದು ಕಂಡುಬಂದಿದೆ. ಮೈಸೂರು ನಗರಪಾಲಿಕೆ ಕೌನ್ಸಿಲ್ನಲ್ಲಿಯೂ ಸಹ ಪಾರಂಪರಿಕ ರಸ್ತೆಗಳು, ವೃತ್ತಗಳಲ್ಲಿ ಜಾಹಿರಾತುಗಳನ್ನು ಅಳವಡಿಸುವುದನ್ನು ನಿಷೇಧಿಸಿರುತ್ತದೆ. ಕಳೆದ ಎರಡು ದಿನಗಳಿಂದ ಕಂಡುಬಂದಿರುವ ಅನೇಕ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್ಗಳು ನಗರದ ಸೌಂದರ್ಯಕ್ಕೆ ಕುಂದುಂಟಾಗುವ ರೀತಿಯಲ್ಲಿ ಎಲ್ಲೆಂದರಲ್ಲಿ ಅಳವಡಿಸಲಾಗಿದ್ದು, ಈ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಅನುಮತಿಸಲಾಗಿದ್ದರೆ, ಅದರ ಅನುಮತಿ ಪಡೆದವರ ವಿವರ, ಅನುಮತಿಸಿದ ಸ್ಥಳ, ಅನುಮತಿಸಲಾದ ಫಲಕದ ಸಂಖ್ಯೆ ಮುಂತಾದ ವಿವರ ಸಲ್ಲಿಸುವುದು.
ಅನುಮತಿ ನೀಡಿಲ್ಲದಿದ್ದರೆ ಇಂತಹ ಅನಧಿಕೃತವಾದ ಫ್ಲೆಕ್ಸ್ ಮತ್ತು ವಿನೈಲ್ ಫಲಕಗಳಿಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಜರೂರಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications