ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್

ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ ಪಾರಂಪರಿಕ ವೃತ್ತಗಳು, ನಗರದ ಸೌಂದರ್ಯಕ್ಕೆ ಪ್ರತೀಕವಾಗಿದೆ. ಮೈಸೂರು ನಗರದ ಸೌಂದರ್ಯ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ.
ಮೈಸೂರು ನಗರದ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳನ್ನು ಬೀದಿ ದೀಪದ ಕಂಬಗಳು, ವೃತ್ತಗಳು, ಪಾರಂಪರಿಕ ವಲಯಗಳಲ್ಲಿ ಅಳವಡಿಸುತ್ತಿರುವುದು ಕಂಡುಬಂದಿದೆ. ಮೈಸೂರು ನಗರಪಾಲಿಕೆ ಕೌನ್ಸಿಲ್ನಲ್ಲಿಯೂ ಸಹ ಪಾರಂಪರಿಕ ರಸ್ತೆಗಳು, ವೃತ್ತಗಳಲ್ಲಿ ಜಾಹಿರಾತುಗಳನ್ನು ಅಳವಡಿಸುವುದನ್ನು ನಿಷೇಧಿಸಿರುತ್ತದೆ. ಕಳೆದ ಎರಡು ದಿನಗಳಿಂದ ಕಂಡುಬಂದಿರುವ ಅನೇಕ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್ಗಳು ನಗರದ ಸೌಂದರ್ಯಕ್ಕೆ ಕುಂದುಂಟಾಗುವ ರೀತಿಯಲ್ಲಿ ಎಲ್ಲೆಂದರಲ್ಲಿ ಅಳವಡಿಸಲಾಗಿದ್ದು, ಈ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಅನುಮತಿಸಲಾಗಿದ್ದರೆ, ಅದರ ಅನುಮತಿ ಪಡೆದವರ ವಿವರ, ಅನುಮತಿಸಿದ ಸ್ಥಳ, ಅನುಮತಿಸಲಾದ ಫಲಕದ ಸಂಖ್ಯೆ ಮುಂತಾದ ವಿವರ ಸಲ್ಲಿಸುವುದು.
ಅನುಮತಿ ನೀಡಿಲ್ಲದಿದ್ದರೆ ಇಂತಹ ಅನಧಿಕೃತವಾದ ಫ್ಲೆಕ್ಸ್ ಮತ್ತು ವಿನೈಲ್ ಫಲಕಗಳಿಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಜರೂರಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications