ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆರೆ ಮಣ್ಣು ಅಕ್ರಮ ಸಾಗಣೆ ಬಹಿರಂಗ ವಿಚಾರಣೆ
ಬೆಂಗಳೂರು, ಜೂ.17 :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜಾವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇರಿಗೇನಹಳ್ಳಿ ಗ್ರಾಮದ ಕೆರೆಯ ಮಣ್ಣನ್ನು ರಾಷ್ಟ್ರೀಯ ಹೆದ್ದಾರಿ -7 ರಲ್ಲಿನ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪ ಕುರಿತ ಬಹಿರಂಗ ವಿಚಾರಣೆ ನಡೆಯಲಿದೆ.
ಈ ವಿಚಾರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎನ್. ಮಂಜುಳಾ ಅವರು ಜೂನ್ 22 ರಂದು ಬೆಳಿಗ್ಗೆ 11ಗಂಟೆಗೆ ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆಸಲಿದ್ದಾರೆ.ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸೂಚನೆಯ ಮೇರೆಗೆ ನಡೆಸುತ್ತಿರುವ ಈ ಬಹಿರಂಗ ವಿಚಾರಣೆಯಲ್ಲಿ ಸಾರ್ವಜನಿಕರು ಖುದ್ದು ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಮತ್ತು ಹೇಳಿಕೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡವಾರ್ತೆ)
Comments
Story first published: Wednesday, June 17, 2009, 10:54 [IST]