ಎಚ್ಜಿಕೆಗೆ ಕರೆ ಮಾಡಿ ಜೀವ ತಿನ್ನುತ್ತಿದ್ದಾಕೆ ಬಂಧನ

ಕೆಳಮಧ್ಯಮ ವರ್ಗದ ಜಯಲಕ್ಷ್ಮಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೊಬೈಲ್ ನಂಬರ್ ಪಡೆದುಕೊಂಡು ಅವರಿಗೆ ಪದೆಪದೇ ಕರೆ ಮಾಡುವ ತೀವ್ರ ತಲೆನೋವಿಗೆ ಕಾರಣಳಾಗಿದ್ದಳು. ಈಕೆಯ ಕಾಟದಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ಪೊಲೀಸರ ಮೊರೆ ಹೋಗಿದ್ದರು. ಕುಮಾರಸ್ವಾಮಿ ಅವರ ಸಹಾಯಕ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಆರಂಭಿಸಿದ ಸದಾಶಿವನಗರ ಪೊಲೀಸರು ಸಿಮ್ ಕಾರ್ಡ್ ಗೆ ನೀಡಿದ್ದ ವಿಳಾಸದ ಪತ್ತೆ ಹಚ್ಚಲು ಸಾಧ್ಯವಾಗದೆ, ಯುವತಿಯೊಡನೆ ಪ್ರೇಮ ಸಂಭಾಷಣೆಗೀಳಿದ ನುರಿತ ಆರಕ್ಷಕರು ಕೊನೆಗೂ ಮಲ್ಲೇಶ್ವರಂ 8 ನೇ ಕ್ರಾಸ್ ನಲ್ಲಿ ಜಯಲಕ್ಷ್ಮಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.ಆದರೆ ಹೋಗಿ ಹೋಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹಿಂದೆ ಏಕೆ ಬಿದ್ದೆ ಎಂದು ಪ್ರಶ್ನಿಸಿದರೆ, ಸರಿಯುತ್ತರ ನೀಡದೆ ಹುಚ್ಚಾಟ ಆಡುತ್ತಿದ್ದಾಳೆ ಎನ್ನುತ್ತಾರೆ ಪೊಲೀಸರು.
ಕಳೆದ ಎಂಟು ತಿಂಗಳಿಂದ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ವಿಚಿತ್ರವಾಗಿ ವರ್ತಿಸುತ್ತಿದ್ದ ಈ ಯುವತಿಯನ್ನು ಬಂಧಿಸಲು ಎರಡು ತಿಂಗಳ ಪೊಲೀಸರು ಮಫ್ತಿ ಸಮವಸ್ತ್ರದಲ್ಲಿ ಬೆಂಗಳೂರು ತುಂಬಾ ತಿರುಗಾಡಿದ್ದಾರೆ. ಅನೇಕ ಸಿಮ್ ಕಾರ್ಡ್ ಬಳಸಿ, ವಿವಿಧ ವಿಳಾಸಗಳನ್ನು ಸೂಚಿಸಿ ಪೊಲೀಸರಿಗೆ ತಲೆನೋವು ತಂದಿದ್ದ ಈಕೆ ಕೊನೆಗೂ ಜಯಲಕ್ಷ್ಮಿ ಸೆರೆ ಸಿಕ್ಕಿದ್ದಾಳೆ. ಜಯಲಕ್ಷ್ಮಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಆಕೆ ತಾಯಿ ಕುಮಾರಸ್ವಾಮಿ ಅವರ ಭೇಟಿ ಮಾಡಿ ತನ್ನ ಮಗಳು ಮಾಡಿದ ಮನ್ನಿಸಿ ಆಕೆ ಮೇಲೆ ಹೇರಲಾಗಿರುವ ಮೊಕದ್ದಮೆ ವಾಪಸ್ಸು ಪಡೆಯಲು ವಿನಂತಿಸಿಕೊಂಡಿದ್ದಾಳೆ. ಆದರೆ, ಕುಮಾರಸ್ವಾಮಿ ಅವರ ಸಹಾಯಕರು ಮೊಕದ್ದಮೆ ಹಿಂಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ ಎನ್ನಲಾಗಿದೆ.
(ಏಜನ್ಸೀಸ್)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications