ಎಚ್ಜಿಕೆಗೆ ಕರೆ ಮಾಡಿ ಜೀವ ತಿನ್ನುತ್ತಿದ್ದಾಕೆ ಬಂಧನ

ಕೆಳಮಧ್ಯಮ ವರ್ಗದ ಜಯಲಕ್ಷ್ಮಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೊಬೈಲ್ ನಂಬರ್ ಪಡೆದುಕೊಂಡು ಅವರಿಗೆ ಪದೆಪದೇ ಕರೆ ಮಾಡುವ ತೀವ್ರ ತಲೆನೋವಿಗೆ ಕಾರಣಳಾಗಿದ್ದಳು. ಈಕೆಯ ಕಾಟದಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ಪೊಲೀಸರ ಮೊರೆ ಹೋಗಿದ್ದರು. ಕುಮಾರಸ್ವಾಮಿ ಅವರ ಸಹಾಯಕ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಆರಂಭಿಸಿದ ಸದಾಶಿವನಗರ ಪೊಲೀಸರು ಸಿಮ್ ಕಾರ್ಡ್ ಗೆ ನೀಡಿದ್ದ ವಿಳಾಸದ ಪತ್ತೆ ಹಚ್ಚಲು ಸಾಧ್ಯವಾಗದೆ, ಯುವತಿಯೊಡನೆ ಪ್ರೇಮ ಸಂಭಾಷಣೆಗೀಳಿದ ನುರಿತ ಆರಕ್ಷಕರು ಕೊನೆಗೂ ಮಲ್ಲೇಶ್ವರಂ 8 ನೇ ಕ್ರಾಸ್ ನಲ್ಲಿ ಜಯಲಕ್ಷ್ಮಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.ಆದರೆ ಹೋಗಿ ಹೋಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹಿಂದೆ ಏಕೆ ಬಿದ್ದೆ ಎಂದು ಪ್ರಶ್ನಿಸಿದರೆ, ಸರಿಯುತ್ತರ ನೀಡದೆ ಹುಚ್ಚಾಟ ಆಡುತ್ತಿದ್ದಾಳೆ ಎನ್ನುತ್ತಾರೆ ಪೊಲೀಸರು.
ಕಳೆದ ಎಂಟು ತಿಂಗಳಿಂದ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ವಿಚಿತ್ರವಾಗಿ ವರ್ತಿಸುತ್ತಿದ್ದ ಈ ಯುವತಿಯನ್ನು ಬಂಧಿಸಲು ಎರಡು ತಿಂಗಳ ಪೊಲೀಸರು ಮಫ್ತಿ ಸಮವಸ್ತ್ರದಲ್ಲಿ ಬೆಂಗಳೂರು ತುಂಬಾ ತಿರುಗಾಡಿದ್ದಾರೆ. ಅನೇಕ ಸಿಮ್ ಕಾರ್ಡ್ ಬಳಸಿ, ವಿವಿಧ ವಿಳಾಸಗಳನ್ನು ಸೂಚಿಸಿ ಪೊಲೀಸರಿಗೆ ತಲೆನೋವು ತಂದಿದ್ದ ಈಕೆ ಕೊನೆಗೂ ಜಯಲಕ್ಷ್ಮಿ ಸೆರೆ ಸಿಕ್ಕಿದ್ದಾಳೆ. ಜಯಲಕ್ಷ್ಮಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಆಕೆ ತಾಯಿ ಕುಮಾರಸ್ವಾಮಿ ಅವರ ಭೇಟಿ ಮಾಡಿ ತನ್ನ ಮಗಳು ಮಾಡಿದ ಮನ್ನಿಸಿ ಆಕೆ ಮೇಲೆ ಹೇರಲಾಗಿರುವ ಮೊಕದ್ದಮೆ ವಾಪಸ್ಸು ಪಡೆಯಲು ವಿನಂತಿಸಿಕೊಂಡಿದ್ದಾಳೆ. ಆದರೆ, ಕುಮಾರಸ್ವಾಮಿ ಅವರ ಸಹಾಯಕರು ಮೊಕದ್ದಮೆ ಹಿಂಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ ಎನ್ನಲಾಗಿದೆ.
(ಏಜನ್ಸೀಸ್)
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications