ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ

By Staff
|
Google Oneindia Kannada News

ಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ತೆರಳಿ ವಾಪಸಾದ ನಂತರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ನೀಡಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದ ವಿ ಸೋಮಣ್ಣ ಅವರ ದಾರಿ ಸುಗಮವಾಗಿದೆ. ನನ್ನ ಮೇಲೆ ಯಾರ ಒತ್ತಡವಿಲ್ಲ. ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿಗಳು ಎದುರಿಸುತ್ತಿರುವ ಸಂದಿಗ್ಧ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರ ಕೆಲಸ ಸುಲಭವಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಕೃಷ್ಣಯ್ಯ ಶೆಟ್ಟಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X