ಮಂಗಳೂರಿಗೆ ಶೀಘ್ರವೇ ಹಗಲು ರೈಲು
ಬೆಂಗಳೂರು, ಜೂ. 17 : ಬೆಂಗಳೂರಿನಿಂದ ಅರಸೀಕೆರೆ ಮಾರ್ಗವಾಗಿ ಮಂಗಳೂರಿಗೆ ಶೀಘ್ರವೇ ಹಗಲು ರೈಲು ಸಂಚಾರದ ಓಡಾಟಕ್ಕೆ ರೈಲ್ವೇ ಇಲಾಖೆ ಬದ್ದವಾಗಿದ್ದು, ಅತಿ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.
ಮಂಗಳೂರು ರೈಲು ಹೋರಾಟ ಸಮಿತಿಯ ಸದಸ್ಯರು ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿ, ಬೇಡಿಕೆ ಮು೦ದಿಟ್ಟ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಹಗಲು ರೈಲು ಸಂಚಾರದ ಬೇಡಿಕೆಯನ್ನು ಈಗಾಗಲೇ ಆಸ್ಕರ್ ಫರ್ನಾ೦ಡಿಸ್ ಪತ್ರ ಮುಖೇನ ಮನವಿ ಮಾಡಿದ್ದಾರೆ. ತಕ್ಷಣವೇ ಈ ಬೇಡಿಕೆ ಬಗ್ಗೆ ಗಮನ ಹರಿಸುತ್ತೇವೆ. ಈ ರೈಲು ಸಂಚಾರವನ್ನು ಯಾವಾಗ ಎಲ್ಲಿಂದ ಆರಂಭಿಸಬೇಕು ಎನ್ನುವ ಮಹತ್ವದ ವಿಷಯವನ್ನು ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications