ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲು ದರೋಡೆ : ನಾಲ್ಕು ದರೋಡೆಕೋರರ ಬಂಧನ

By Staff
|
Google Oneindia Kannada News

ಧಾರವಾಡ, ಜೂ. 17 : ಯಶವಂತಪುರ-ಲೊಂಡಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸಿ ಹಣ ದೋಚಿಕೊಂಡು ಪರಾರಿಯಾಗುತ್ತಿದ್ದ ದರೋಡೆಕೋರರ ತಂಡದ ಮೇಲೆ ಧಾರವಾಡ ಪೊಲೀಸರು ಗುಂಡು ಹಾರಿಸಿದ್ದು, ಗೋವಾದ ಲೊಂಡಾದ ಬಳಿ ಆರು ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ವಿವರಣೆ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಿವಕುಮಾರ್, ಯಶವಂತಪುರ-ಲೊಂಡಾ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಬೆದರಿಸಿ ಹಣ ದೋಚಿಕೊಂಡು ಪರಾರಿಯಾಗುತ್ತಿರುವ ಮಾಹಿತಿ ಸಿಕ್ಕಕ್ಷಣ ಕಾರ್ಯಪ್ರವೃತ್ತರಾದ ಧಾರವಾಡ ಪೊಲೀಸರು ರೈಲು ಬೆನ್ನಟ್ಟಿದ್ದಾರೆ. ಆದ ಪೊಲೀಸರಿಗೆ ವಿಷಯ ತಿಳಿದಿದೆ ಎಂದು ಗೊತ್ತಾದ ದರೋಡೆಕೋರರು ಪಕ್ಕದಲ್ಲಿ ತೆರಳುತ್ತಿದ್ದ ಗೂಡ್ಸ್ ರೈಲಿಗೆ ಹಾರಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆಗ ಲೊಂಡಾ ಬಳಿ ನಮ್ಮ ಪೊಲೀಸರು ದರೋಡೆಕೋರರ ಮೇಲೆ ಗುಂಡು ಹಾರಿಸಲಾಗಿದೆ. ಆಗ ಆರು ಮಂದಿ ದರೋಡೆಕೋರರನ್ನು ಬಂಧಿಸಲು ಸಫಲರಾಗಿದ್ದಾರೆ.

ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ, ನಾಗರಾಜ್, ಮೊಹ್ಮದ್ ಅಲಿಯಾಸ್ ಬಿಲ್ಲಾ, ಜೈನೀಸ್ ಮಂಜು ಸಿಕ್ಕಿ ದರೋಡೆಕೋರರಾಗಿದ್ದಾರೆ. ಅನೇಕ ಕಳ್ಳತನ ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಬೇಕಾಗಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X