ಶಿವಮೊಗ್ಗದಲ್ಲಿ ರಾಮೋಜಿ ಮಾದರಿಯ ಫಿಲ್ಮ್ ಸಿಟಿ

ಅವರು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಸಂಸದರ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಹೊಸ ರೈಲು ಮಾರ್ಗ, ಜೋಗದ ಅಭಿವೃದ್ಧಿ, ಫಿಲ್ಮ್ ಸಿಟಿ ಕುರಿತಂತೆ ವಿವರ ನೀಡಿದರು.
ವರ್ತೂರು ಪ್ರಕಾಶ್ ಮಾಡಿರುವ ಆರೋಪವನ್ನು ತಳ್ಳಿಹಾಕಿದ ಅವರು, ತಮ್ಮ ತಂದೆ ಯಾವುದೇ ರೀತಿಯ ಕುಟಂಬ ರಾಜಕಾರಣ ಮಾಡುತ್ತಿಲ್ಲ. ಆಡಳಿತದಲ್ಲಿಯೂ ಅವರ ಕುಟುಂಬ ಯಾವುದೇ ಹಸ್ತಕ್ಷೇಪವನ್ನು ಮಾಡುವುದಿಲ್ಲ. ನಾನು 15 ವರ್ಷಗಳಿಂದ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸಿದ್ದೇನೆ. ಈ ಕಾರಣಕ್ಕಾಗಿ ತಮಗೆ ಟಿಕೇಟ್ ನೀಡಲಾಗಿದೆ. ಅಲ್ಲದೇ, ಮುಖ್ಯಮಂತ್ರಿ ಕುಟುಂಬವು ಆಡಳಿತದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪವನ್ನು ಮಾಡುತ್ತಾರೆ ಎಂಬ ಆರೋಪ ಕೂಡ ಸತ್ಯಕ್ಕೆ ದೂರವಾದುದು. ಅಭಿವೃದ್ಧಿಯ ವಿಷಯಗಳಲ್ಲಿ ಮಾತ್ರ ಸರ್ಕಾರದೊಂದಿಗೆ ತಾವು ಸಂಪರ್ಕವಿಟ್ಟುಕೊಂಡಿರುವುದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ವಿರುದ್ಧ ಹರಿಹಾಯ್ದ ರಾಘವೇಂದ್ರ, ಬಿಜೆಪಿ ಹಣ, ಹೆಂಡ ಹಂಚಿ ಗೆದ್ದಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಜನರು ಬಿಜೆಪಿಯ ಜನಪರ ಆಡಳಿತವನ್ನು ನೋಡಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಗೆಲ್ಲಿಸಿದ್ದಾರೆಯೇ ಹೊರತು ಬೇರೇನೂ ಅಲ್ಲ. ಬಂಗಾರಪ್ಪನವರು ಹಿರಿಯರು. ಸೋಲು ಗೆಲುವು ಸಾಮಾನ್ಯ ಎಂಬುದನ್ನು ಅರಿತುಕೊಂಡು ನಮಗೆ ಮಾರ್ಗದರ್ಶನ ನೀಡಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಜೊತೆಗೆ ಸೇರಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವೆ. ಈಗಾಗಲೇ ಶಿವಮೊಗ್ಗ-ತಾಳಗುಪ್ಪ, ತಾಳಗುಪ್ಪ-ಹೊನ್ನಾವರ, ಹರಿಹರ-ಶಿವಮೊಗ್ಗಗಳ ಮಧ್ಯೆ ರೈಲು ಮಾರ್ಗಕ್ಕೆ ಮನವಿ ಮಾಡಲಾಗಿದೆ. ಹೊನ್ನಾವರ-ತಾಳಗುಪ್ಪ ಸಂಪರ್ಕಕ್ಕೆ ಸಾವಿರ ಕೋಟಿ ರು. ಬೇಕಾಗಿದ್ದು, ಈಗಾಗಲೇ 250 ಕೋಟಿ ರು. ಮಂಜೂರಾಗಿದೆ. ಭದ್ರಾವತಿ-ಶಿವಮೊಗ್ಗ ನಡುವಿನ ಚತುಸ್ಪಥ ರಸ್ತೆಯನ್ನು ಲಯನ್ಸ್ ಸಫಾರಿವರೆಗೂ ವಿಸ್ತರಿಸಲಾಗುವುದು ಎಂದು ಅವರು ವಿವರಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications