ಶಿವಮೊಗ್ಗದಲ್ಲಿ ರಾಮೋಜಿ ಮಾದರಿಯ ಫಿಲ್ಮ್ ಸಿಟಿ

ಅವರು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಸಂಸದರ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಹೊಸ ರೈಲು ಮಾರ್ಗ, ಜೋಗದ ಅಭಿವೃದ್ಧಿ, ಫಿಲ್ಮ್ ಸಿಟಿ ಕುರಿತಂತೆ ವಿವರ ನೀಡಿದರು.
ವರ್ತೂರು ಪ್ರಕಾಶ್ ಮಾಡಿರುವ ಆರೋಪವನ್ನು ತಳ್ಳಿಹಾಕಿದ ಅವರು, ತಮ್ಮ ತಂದೆ ಯಾವುದೇ ರೀತಿಯ ಕುಟಂಬ ರಾಜಕಾರಣ ಮಾಡುತ್ತಿಲ್ಲ. ಆಡಳಿತದಲ್ಲಿಯೂ ಅವರ ಕುಟುಂಬ ಯಾವುದೇ ಹಸ್ತಕ್ಷೇಪವನ್ನು ಮಾಡುವುದಿಲ್ಲ. ನಾನು 15 ವರ್ಷಗಳಿಂದ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸಿದ್ದೇನೆ. ಈ ಕಾರಣಕ್ಕಾಗಿ ತಮಗೆ ಟಿಕೇಟ್ ನೀಡಲಾಗಿದೆ. ಅಲ್ಲದೇ, ಮುಖ್ಯಮಂತ್ರಿ ಕುಟುಂಬವು ಆಡಳಿತದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪವನ್ನು ಮಾಡುತ್ತಾರೆ ಎಂಬ ಆರೋಪ ಕೂಡ ಸತ್ಯಕ್ಕೆ ದೂರವಾದುದು. ಅಭಿವೃದ್ಧಿಯ ವಿಷಯಗಳಲ್ಲಿ ಮಾತ್ರ ಸರ್ಕಾರದೊಂದಿಗೆ ತಾವು ಸಂಪರ್ಕವಿಟ್ಟುಕೊಂಡಿರುವುದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ವಿರುದ್ಧ ಹರಿಹಾಯ್ದ ರಾಘವೇಂದ್ರ, ಬಿಜೆಪಿ ಹಣ, ಹೆಂಡ ಹಂಚಿ ಗೆದ್ದಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಜನರು ಬಿಜೆಪಿಯ ಜನಪರ ಆಡಳಿತವನ್ನು ನೋಡಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಗೆಲ್ಲಿಸಿದ್ದಾರೆಯೇ ಹೊರತು ಬೇರೇನೂ ಅಲ್ಲ. ಬಂಗಾರಪ್ಪನವರು ಹಿರಿಯರು. ಸೋಲು ಗೆಲುವು ಸಾಮಾನ್ಯ ಎಂಬುದನ್ನು ಅರಿತುಕೊಂಡು ನಮಗೆ ಮಾರ್ಗದರ್ಶನ ನೀಡಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಜೊತೆಗೆ ಸೇರಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವೆ. ಈಗಾಗಲೇ ಶಿವಮೊಗ್ಗ-ತಾಳಗುಪ್ಪ, ತಾಳಗುಪ್ಪ-ಹೊನ್ನಾವರ, ಹರಿಹರ-ಶಿವಮೊಗ್ಗಗಳ ಮಧ್ಯೆ ರೈಲು ಮಾರ್ಗಕ್ಕೆ ಮನವಿ ಮಾಡಲಾಗಿದೆ. ಹೊನ್ನಾವರ-ತಾಳಗುಪ್ಪ ಸಂಪರ್ಕಕ್ಕೆ ಸಾವಿರ ಕೋಟಿ ರು. ಬೇಕಾಗಿದ್ದು, ಈಗಾಗಲೇ 250 ಕೋಟಿ ರು. ಮಂಜೂರಾಗಿದೆ. ಭದ್ರಾವತಿ-ಶಿವಮೊಗ್ಗ ನಡುವಿನ ಚತುಸ್ಪಥ ರಸ್ತೆಯನ್ನು ಲಯನ್ಸ್ ಸಫಾರಿವರೆಗೂ ವಿಸ್ತರಿಸಲಾಗುವುದು ಎಂದು ಅವರು ವಿವರಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications