ಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ
ಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ ಗೊಂದಲ ಸೃಷ್ಟಿಸಿಕೊಳ್ಳುತ್ತಿರುವುದು ಸರಿ ಎನಿಸುತ್ತಿಲ್ಲ ಬಿಡಿ.
*ಮೃತ್ಯುಂಜಯ ಕಲ್ಮಠ
ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರಿಗಾಗಿ ಕಳೆದ ಕೆಲ ತಿಂಗಳಗಳ ಹಿಂದೆ ಹೈದರಾಬಾದ್ ಕರ್ನಾಟಕ ಭಾಗದಿಂದ ಸಚಿವರಾಗಿದ್ದ ಎಸ್ ಕೆ ಬೆಳ್ಳುಬ್ಬಿ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದೀರಿ. ಇದೀಗ ನಿಮ್ಮ ಪರಮಾತ್ಮ ಆಗಿರುವ ಸತತ ಮೂರು ಬಾರಿ ಶಾಸಕರಾಗಿದ್ದ ಹಾಗೂ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ ಮುಜರಾಯಿ ಖಾತೆಯ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸಿದ್ದ ಕೃಷ್ಣಯ್ಯಶೆಟ್ಟಿ ಅವರಿಂದ ರಾಜೀನಾಮೆ ಪಡೆದುಕೊಂಡು ವಿ ಸೋಮಣ್ಣ ಅವರಿಗೆ ಸ್ಥಾನ ಕಲ್ಪಿಸಿದ್ದೀರಿ. ಸರಿ, ಇದು ಎಲ್ಲಿಯವರೆಗೆ ಅಂತ ?
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಆತನ ಸನ್ನಿದಿಯಲ್ಲಿ ಸಚಿವ ಸ್ಥಾನದ ಹುದ್ದೆಯ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿದ ಮಾಜಿ ಸಚಿವ ಕೃಷ್ಣಯ್ಯ ಕುಟುಂಬ ಸಮೇತ ನೇರವಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ಆಗ ಕುಟುಂಬ ಸದಸ್ಯರು ಸೇರಿ ಕೃಷ್ಣಯ್ಯ ಶೆಟ್ಟಿ ಕಣ್ಣಲ್ಲಿ ನೀರು ಉಕ್ಕಿ ಬಂತು. ಅದು ಸಹಜ. ಸಿಕ್ಕಿರುವ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸಿದರೂ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಗಿ ಬಂದಿದ್ದು, ಎಂತವರಿಗೂ ದುಃಖ ಸಂಗತಿಯೇ. ಇದಕ್ಕೆ ಕೃಷ್ಣಯ್ಯ ಶೆಟ್ಟಿ ಹೊರತಲ್ಲ.
ನಾಳೆ ಅನ್ಯ ಪಕ್ಷದ ಇನ್ನೊಬ್ಬ ಪ್ರಬಲ ಮುಖಂಡ ಬಿಜೆಪಿ ಸೇರ್ಪಡೆಗೊಂಡರೆ ಅವರಿಗಾಗಿ ಮತ್ತ್ಯಾವ ಸಚಿವರನ್ನು ಬಲಿ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೀರಿ ? ನೀವು ಮಾಡುತ್ತಿರುವ ಕೆಲಸದಿಂದ ನಿಮ್ಮದೇ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ನಿಮ್ಮ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನುವುದನ್ನು ಮರೆಯಬೇಡಿ. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಈಗಾಗಲೇ ಇದೇ ಕಾರಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮಿಂದ ಪದೆಪದೇ ತಲೆದಂಡ ತೀರ್ಮಾನಗಳು ಹೊರಬೀಳತೊಡಗಿದರೆ, ಕೊನೆಗೆ ಏನಾಗಬಹುದು ಎಂದು ಸ್ವಲ್ಪ ಯೋಚಿಸಬೇಕಲ್ಲವೇ ?
ಇನ್ನೂ ನಾಲ್ಕು ವರ್ಷ ರಾಜ್ಯಭಾರ ಮಾಡಬೇಕಾಗಿದೆ. ಬದಲಾವಣೆ ಬಯಸಿ ರಾಜ್ಯದ ಜನತೆ ನಿಮಗೆ ಅಧಿಕಾರ ನೀಡಿದ್ದಾರೆ. ಕಳೆದ ಒಂದು ತಿಂಗಳಿಂದ ನಿಮ್ಮ ಸರಕಾರದಲ್ಲಿ ನಡೆದ ಬೆಳವಣಿಗೆಗಳು ಮತ ನೀಡಿದ ಮತದಾರರಿಗೆ ಭ್ರಮನಿರಸವಾಗಿದೆ. ಕಾಂಗ್ರೆಸ್ ಪಕ್ಷಕ್ಕಿಂತ ಕಚ್ಚಾಟದಲ್ಲಿ ನಾವೇನು ಕಮ್ಮಿ ಇಲ್ಲ ಎಂಬಂತೆ ವರ್ತಿಸಿದ್ದೀರಿ. ಇನ್ನೂ ಮುಂದಾದರೂ ತಪ್ಪು ಮಾಡದಂತೆ ರಾಜ್ಯ ಹಾಗೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಬಾರದೇ ?
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications