ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಕೇಂದ್ರ ಚಿಂತನೆ, ಅಜಾದ್
ಭುಬನೇಶ್ವರ್, ಜೂ. 18 : ನವದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ಮಂಡಳಿ (ಏಮ್ಸ್) ಶಾಖೆಗಳನ್ನು ದೇಶದ ಇತರೆ ಪ್ರಮುಖ ನಗರಗಳಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ರಾಜ್ಯ ನಾಲ್ಕು ಕೇಂದ್ರ ಸಚಿವರು ಪ್ರಧಾನಮಂತ್ರಿ ಹಾಗೂ ಕೇಂದ್ರದ ಆರೋಗ್ಯಮಂತ್ರಿ ಮೇಲೆ ಒತ್ತಡ ತರುವ ಮೂಲಕ ಬೆಂಗಳೂರಿನಲ್ಲಿ ಏಮ್ಸ್ ನ ಶಾಖೆ ಸ್ಥಾಪಿಸಲು ಪ್ರಯತ್ನಿಸಬೇಕಿದೆ.
ಈ ಕುರಿತು ಒರಿಸ್ಸಾ ಪ್ರವಾಸದಲ್ಲಿರುವ ಕೇಂದ್ರದ ಆರೋಗ್ಯ ಸಚಿವ ಗುಲಾಮ್ ನಬಿ ಆಜಾದ್ ಮಾತನಾಡಿ, ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಶಾಖೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. ಒರಿಸ್ಸಾದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸಲು ಕಾಮಗಾರಿ ಆರಂಭಿಸಲಾಗಿದೆ. ಮೊದಲು ಒರಿಸ್ಸಾದಲ್ಲಿ ಒಂದು ಶಾಖೆಯನ್ನು ಸ್ಥಾಪಿಸಿ ಅದರ ಸಾಧಕ ಬಾಧಕಗಳನ್ನು ಆವಲೋಕಿಸಿ ದೇಶದ ಇತರೆ ನಗರಗಳಲ್ಲಿ ಸ್ಥಾಪಿಸಲಾಗುವುದು ಎಂದಿದ್ದಾರೆ.
ಎಮ್ಸ್ ಬೇಕಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ತೆಗೆದುಕೊಂಡರೂ ರಾಜ್ಯ ಸರಕಾರ ಈ ಬಗ್ಗೆ ನಿರ್ಲಕ್ಷ್ಯವಹಿಸಿದೆ. ಕೇಂದ್ರ ಸರಕಾರದಿಂದ ಅಗತ್ಯ ಭೂಮಿಯನ್ನು ನೀಡಲಾಗಿದೆ. ಹಣವನ್ನು ಬಿಡುಗಡೆ ಮಾಡಲಾಗಿದೆ. ಆದರೆ, ರಾಜ್ಯ ಸರಕಾರ ಮಾತ್ರ ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ ಎಂದು ಅವರು ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿರುದ್ಧ ಹರಿಹಾಯ್ದರು.
(ಏಜನ್ಸೀಸ್)