ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚಾಮುಂಡಿಬೆಟ್ಟಕ್ಕೆ ಸೂಕ್ತ ಭದ್ರತೆ, ಮಣಿವಣ್ಣನ್
ಮೈಸೂರು, ಜೂ. 18 : ಹೆಚ್ಚು ಭಕ್ತಾದಿಗಳು ಆಗಮಿಸುವ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಗಳ ಪ್ರವೇಶ ದ್ವಾರಗಳಲ್ಲಿ ರಕ್ಷಣಾ ದೃಷ್ಟಿಯಿಂದ ಲೋಹಶೋಧಕ ಯಂತ್ರಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅವರು ಸೂಚಿಸಿದ್ದಾರೆ.
ಅವರು ಬುಧವಾರ ತಮ್ಮ ಕಚೇರಿಯಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಲ್ಕಂಡ ಎರಡೂ ದೇವಸ್ಥಾನಗಳಲ್ಲಿ ರಕ್ಷಣಾ ವ್ಯವಸ್ಥೆಗೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಒಂದು ವೇಳೆ ಅಗತ್ಯ ಸಿಬ್ಬಂದಿ ಕೊರತೆ ಇದ್ದಲ್ಲಿ ಖಾಸಗಿ ರಕ್ಷಣಾ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಮುಜರಾಯಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಆಸ್ತಿಗಳ ಸರ್ವೆ ಕಾರ್ಯ ಕೈಗೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, June 18, 2009, 12:48 [IST]