ಭಯೋತ್ಪಾದನೆ : ಆರು ರಾಜ್ಯಗಳ ಪೊಲೀಸರ ಸಭೆ
ಬೆಂಗಳೂರು, ಜೂ. 18 : ಭಯೋತ್ಪಾದಕರ ದಾಳಿಗೆ ಸಂಬಂಧಿಸಿದಂತೆ ಅನೇಕ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ದೇಶದ ಆರು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸಮಗ್ರ ಚರ್ಚೆ ನಡೆಸಿದರು. ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ನೇತೃತ್ವದ ಸಭೆಯಲ್ಲಿ ಕೊಲ್ಕತ್ತಾ, ಚೆನ್ನೈ, ಅಹಮದಾಬಾದ್, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೆಟ್ರೋ ನಗರಗಳಲ್ಲಿ ಭಯೋತ್ಪಾದಕರು ತಮ್ಮ ಕೃತ್ಯಗಳನ್ನು ಎಸಗುತ್ತಿದ್ದಾರೆ. ಈ ಬಗ್ಗೆ ಅನೇಕ ಬೆದರಿಕೆಗಳು, ಮುನ್ನಚ್ಚರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ಆರು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಉಗ್ರರ ಕೃತ್ಯ ತಡೆಗೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಅಲ್ಲದೇ ಮೆಟ್ರೋ ನಗರಗಳಲ್ಲಿ ಇರುವ ಪೊಲೀಸರಿಗೆ ಭಯೋತ್ಪಾದಕರ ಕೃತ್ಯ ತಡೆಯಲು ವಿಶೇಷ ತರಬೇತಿ ನೀಡಲಾಗುವುದು ಎಂದು ಶಂಕರ ಬಿದರಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications