ಕೃಷ್ಣ ಕಚೇರಿಯ ಬೀಗ ಒಡೆದ ಡಿ ಬಿ ಚಂದ್ರೇಗೌಡ
ಬೆಂಗಳೂರು, ಜೂ. 18 : ಇತ್ತೀಚೆಗಷ್ಟೇ ಪೂಜೆ ನೆರವೇರಿಸಿ ಸಂದರ್ಶಕರ ಅನುಕೂಲಕ್ಕಾಗಿ ಪೀಠೋಪಕರಣಗಳನ್ನು ಹಾಕಿಸಿ ಕಚೇರಿ ಪ್ರವೇಶಿಸಿದ್ದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರ ಸಂಸದರ ಕಛೇರಿಯನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ ಬಿ ಚಂದ್ರೇಗೌಡ ಬೀಗ ಒಡೆದು ಅಕ್ರಮವಾಗಿ ಸ್ವಾಧೀನ ಪಡೆಸಿಕೊಂಡ ಘಟನೆ ಬುಧವಾರ ನಡೆದಿದೆ.
ನಗರದ ಹೃದಯ ಭಾಗದಲ್ಲಿರುವ ಆಲಿ ಆಸ್ಗರ್ ರಸ್ತೆಯಲ್ಲಿರುವ ಸಂಸದರ ಕಛೇರಿಯನ್ನು ಎಸ್ ಎಂ ಕೃಷ್ಣ ಅವರಿಗೆ ಮಂಜೂರು ಮಾಡಲಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್ ಟಿ ಸಾಂಗ್ಲಿಯಾನ ಪರಾಭವಗೊಂಡ ನಂತರ ಕೃಷ್ಣ ಅವರಿಗೆ ಬೆಂಗಳೂರು ಜಿಲ್ಲಾಧಿಕಾರಿ ಈ ಕಚೇರಿಯನ್ನು ಮಂಜೂರು ಮಾಡಿ ಇದಕ್ಕೆ ಸಂಬಂಧಪಟ್ಟ ಕಾಗದಪತ್ರವನ್ನು ಕೃಷ್ಣ ಅವರಿಗೆ ನೀಡಿದ್ದರು.
ಕೃಷ್ಣ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ಅಕ್ರಮ ಪ್ರವೇಶದ ಬಗ್ಗೆ ದೂರು ನೀಡಿದ್ದಾರೆ. ಈ ಕಚೇರಿಯಲ್ಲಿ ಕೃಷ್ಣ ಅವರು ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿದ್ದರು. ಸಿಬ್ಬಂದಿಗಳ ಅಹವಾಲನ್ನು ಸ್ವೀಕರಿಸುತ್ತಿದ್ದರು. ಚಂದ್ರೇಗೌಡ ಅವರು ಇದ್ದಕ್ಕಿದ್ದಂತೆ ಕಚೇರಿ ಪ್ರವೇಶಿಸಿ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ. ಇದರಿಂದ ನಮಗೆ ಒಳಗೆ ಪ್ರವೇಶಿಸಲು ಆಗುತ್ತಿಲ್ಲ. ಕೃಷ್ಣ ಅವರಿಗೆ ಸಂಬಂದಪಟ್ಟ ಹಲವಾರು ದಾಖಲೆ ಪತ್ರಗಳಿವೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಕೃಷ್ಣ ಈಗ ಸಚಿವರಾಗಿರುವುದರಿಂದ ಅವರಿಗೆ ಕಚೇರಿ ಅನಗತ್ಯ. ಈ ಕಚೇರಿಯನ್ನು ಮುಖ್ಯಮಂತ್ರಿಯವರಿಂದ ತಾವು ಮಂಜೂರು ಮಾಡಿಕೊಳ್ಳುವುದಾಗಿ ಚಂದ್ರೇಗೌಡ ಸಮಜಾಯಿಷಿ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications