ಕೃಷ್ಣ ಕಚೇರಿಯ ಬೀಗ ಒಡೆದ ಡಿ ಬಿ ಚಂದ್ರೇಗೌಡ
ಬೆಂಗಳೂರು, ಜೂ. 18 : ಇತ್ತೀಚೆಗಷ್ಟೇ ಪೂಜೆ ನೆರವೇರಿಸಿ ಸಂದರ್ಶಕರ ಅನುಕೂಲಕ್ಕಾಗಿ ಪೀಠೋಪಕರಣಗಳನ್ನು ಹಾಕಿಸಿ ಕಚೇರಿ ಪ್ರವೇಶಿಸಿದ್ದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರ ಸಂಸದರ ಕಛೇರಿಯನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ ಬಿ ಚಂದ್ರೇಗೌಡ ಬೀಗ ಒಡೆದು ಅಕ್ರಮವಾಗಿ ಸ್ವಾಧೀನ ಪಡೆಸಿಕೊಂಡ ಘಟನೆ ಬುಧವಾರ ನಡೆದಿದೆ.
ನಗರದ ಹೃದಯ ಭಾಗದಲ್ಲಿರುವ ಆಲಿ ಆಸ್ಗರ್ ರಸ್ತೆಯಲ್ಲಿರುವ ಸಂಸದರ ಕಛೇರಿಯನ್ನು ಎಸ್ ಎಂ ಕೃಷ್ಣ ಅವರಿಗೆ ಮಂಜೂರು ಮಾಡಲಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್ ಟಿ ಸಾಂಗ್ಲಿಯಾನ ಪರಾಭವಗೊಂಡ ನಂತರ ಕೃಷ್ಣ ಅವರಿಗೆ ಬೆಂಗಳೂರು ಜಿಲ್ಲಾಧಿಕಾರಿ ಈ ಕಚೇರಿಯನ್ನು ಮಂಜೂರು ಮಾಡಿ ಇದಕ್ಕೆ ಸಂಬಂಧಪಟ್ಟ ಕಾಗದಪತ್ರವನ್ನು ಕೃಷ್ಣ ಅವರಿಗೆ ನೀಡಿದ್ದರು.
ಕೃಷ್ಣ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ಅಕ್ರಮ ಪ್ರವೇಶದ ಬಗ್ಗೆ ದೂರು ನೀಡಿದ್ದಾರೆ. ಈ ಕಚೇರಿಯಲ್ಲಿ ಕೃಷ್ಣ ಅವರು ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿದ್ದರು. ಸಿಬ್ಬಂದಿಗಳ ಅಹವಾಲನ್ನು ಸ್ವೀಕರಿಸುತ್ತಿದ್ದರು. ಚಂದ್ರೇಗೌಡ ಅವರು ಇದ್ದಕ್ಕಿದ್ದಂತೆ ಕಚೇರಿ ಪ್ರವೇಶಿಸಿ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ. ಇದರಿಂದ ನಮಗೆ ಒಳಗೆ ಪ್ರವೇಶಿಸಲು ಆಗುತ್ತಿಲ್ಲ. ಕೃಷ್ಣ ಅವರಿಗೆ ಸಂಬಂದಪಟ್ಟ ಹಲವಾರು ದಾಖಲೆ ಪತ್ರಗಳಿವೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಕೃಷ್ಣ ಈಗ ಸಚಿವರಾಗಿರುವುದರಿಂದ ಅವರಿಗೆ ಕಚೇರಿ ಅನಗತ್ಯ. ಈ ಕಚೇರಿಯನ್ನು ಮುಖ್ಯಮಂತ್ರಿಯವರಿಂದ ತಾವು ಮಂಜೂರು ಮಾಡಿಕೊಳ್ಳುವುದಾಗಿ ಚಂದ್ರೇಗೌಡ ಸಮಜಾಯಿಷಿ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications