Get Updates
Get notified of breaking news, exclusive insights, and must-see stories!

ಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ

ಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಮೇಶ್ವರ ಠಾಕೂರ್ ಪ್ರಮಾಣ ವಚನದ ಗೌಪ್ಯತೆಯನ್ನು ಬೋಧಿಸಿದರು.

ಮೂರು ಬಾರಿ ವಿಜಯನಗರ ಕ್ಷೇತ್ರ ಹಾಗೂ ಒಂದು ಸಲ ಗೋವಿಂದರಾಜ ನಗರ ಕ್ಷೇತ್ರದ ಶಾಸಕರಾಗಿದ್ದ ವಿ ಸೋಮಣ್ಣ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಎಚ್ ಪಟೇಲ್ ನೇತೃತ್ವದ ಜನತಾದಳದ ಸರಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಹತ್ತು ವರ್ಷಗಳ ನಂತರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋಮಣ್ಣ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದರು. ಉಮೇಶ ಕತ್ತಿ ಅವರನ್ನು ಸಚಿವರನ್ನಾಗಿಸಲು ಎಸ್ ಕೆ ಬೆಳ್ಳಬ್ಬಿ ಹಾಗೂ ಸೋಮಣ್ಣ ಅವರನ್ನು ಸಚಿವರನ್ನಾಗಿಸಲು ಕೃಷ್ಣಯ್ಯ ಶೆಟ್ಟಿ ಅವರ ತಲೆದಂಡವನ್ನು ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+