9 ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲು ಆದೇಶ
ಬೆಂಗಳೂರು,ಜೂ. 19: ಒಂಬತ್ತು ಪ್ರಮುಖ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿ ಸಿ ಬಿ ) ಆದೇಶ ನೀಡಿದೆ. ಮಾಲಿನ್ಯ ಕಾಯ್ದೆ ಉಲ್ಲಂಘನೆ ಹಾಗೂ ಸಂಸ್ಕರಣಾ ಘಟಕ ಸ್ಥಾಪನೆ ಮಾಡುವಲ್ಲಿ ಸದರಿ ಆಸ್ಪತ್ರೆಗಳು ವಿಫಲವಾಗಿದೆ. ಜುಲೈ 1 ರಿಂದ ಆದೇಶ ಜಾರಿಗೆ ಬರಲಿದ್ದು, ತಕ್ಷಣದಿಂದ ರೋಗಿಗಳನ್ನು ದಾಖಲಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.
ವಿಕ್ಟೋರಿಯಾ, ವಾಣಿ ವಿಲಾಸ್, ಕಿದ್ವಾಯಿ ಸ್ಮಾರಕ ಗ್ರಂಥಿ ಅಸ್ಪತ್ರೆ, ಮಿಂಟೋ, ಬೌರಿಂಗ್ ಮತ್ತು ಲೇಡಿ ಕರ್ಜನ್, ರಾಜೀವ್ ಗಾಂಧಿ ಇನ್ಸ್ ಸ್ಟಿ ಟ್ಯೂಟ್ , ಸರ್ ಇಸ್ಮಾಯಿಲ್ ಸೇಠ್, ಸಾರ್ವಜನಿಕ ಆಸ್ಪತ್ರೆ, ಜಯನಗರ ಹಾಗೂ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ಆದೇಶ ನೀಡಲಾಗಿದೆ. ಕೆಎಸ್ ಪಿ ಸಿ ಬಿ ನೀಡಿರುವ ಆದೇಶದಲ್ಲಿ 6 ಖಾಸಗಿ ಆಸ್ಪತ್ರೆಗಳು ಸೇರಿವೆ. ಹೆಚ್ ಎ ಎಲ್ ಆಸ್ಪತ್ರೆ, ಚಿನ್ಮಯ ಮಿಷನ್ ಆಸ್ಪತ್ರೆ, ಸೈಂಟ್ ಮಾರ್ಥಾಸ್ ಆಸ್ಪತ್ರೆ, ಅಂಬೇಡ್ಕರ್ ಆಸ್ಪತ್ರೆ, ಕಿಮ್ಸ್ ಹಾಗೂ ಇಂದಿರಾನಗರದ ಇಎಸ್ ಐ ಆಸ್ಪತ್ರೆಗಳನ್ನು ಮುಚ್ಚುವಂತೆ ಲೋಕ್ ಅದಾಲತ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ.
ಆಸ್ಪತ್ರೆಗಳಿಗೆ ಮಾಲಿನ್ಯ ಸಂಸ್ಕರಣ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಅದಾಲತ್ ತಿರಸ್ಕರಿಸಿದೆ. 1974 ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಲ ಕಾಯ್ದೆ 33 (ಎ) ಅಡಿಯಲ್ಲಿ ಆಸ್ಪತ್ರೆಗಳಿಗೆ ಬಂದ್ ಆದೇಶ ನೀಡಲಾಗಿದೆ.ಆದೇಶದ ಪ್ರತಿ ತಲುಪಿದ 15 ದಿನದೊಳಗೆ ಬದಲೀ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಹಾಗೂ ರೋಗಿಗಳನ್ನುಸ್ಥಳಾಂತರಿಸಬೇಕು ಎಂದು ಹೇಳಲಾಗಿದೆ. ಅಲ್ಲಿಗೂ ಬಗ್ಗದಿದ್ದಲ್ಲಿ ವಿದ್ಯುತ್ ಹಾಗೂ ನೀರು ಸರಬರಾಜನ್ನು ನಿಲ್ಲಿಸುವಂತೆ ಬೆಸ್ಕಾಂ ಮತ್ತು ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿಗೆ ಸೂಚಿಸಲಾಗಿದೆ.ಸರ್ಕಾರ ಈ ಬಗ್ಗೆ ಕಠಿಣವಾಗಿ ವರ್ತಿಸಬೇಕಿದೆ ಎಂದು ಲೋಕ್ ಅದಾಲತ್ ನ ಅಧ್ಯಕ್ಷ ಕೆ ಎಲ್ ಮಂಜುನಾಥ್ ಹಾಗೂ ಹಿರಿಯ ಸದಸ್ಯ, ಪರಿಸರವಾಗಿ ಯಲ್ಲಪ್ಪ ರೆಡ್ಡಿ ಗುಡುಗಿದ್ದಾರೆ.
(ದಟ್ಸ್ ಕನ್ನಡವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications