ಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ
ಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಐಎಎಸ್, ಐಪಿಎಸ್, ಐಎಫ್ ಎಸ್ ಮತ್ತು ಕೆಎಎಸ್ ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡುವಂತೆ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡಿ, ಬದ್ಧತೆಯಿಂದ ಕೆಲಸ ಮಾಡುವಂತೆ ಕಿವಿ ಮಾತು ಹೇಳಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮೂರು ತಿಂಗಳಲ್ಲಿ ಕಾರ್ಯದಕ್ಷತೆಯನ್ನು ರೂಢಿಸಿಕೊಳ್ಳದ ಅಧಿಕಾರಿಗಳಿಗೆ ಮುಲಾಜಿಲ್ಲದೆ ಕಡ್ಡಾಯ ನಿವೃತ್ತಿ ನೀಡಿ ಎಂದು ಯಡಿಯೂರಪ್ಪ ಆಜ್ಞಾಪಿಸಿದ್ದಾರೆ.
ಈ ಸೂಚನೆಗೂ ಬಗ್ಗದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಸರಕಾರ ಸೂಚಿಸಿದೆ. ಜಡ್ಡುಗಟ್ಟಿರುವ ಅಧಿಕಾರಿಗಳಿಗೆ ಬುದ್ಧಿ ಕಲಿಸಲು ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜನಸಾಮನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಲು ಯಡಿಯೂರಪ್ಪ ಸರಕಾರ ಮುಂದಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications