ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಗೆ ಮೊರೆ
ಬೆಂಗಳೂರು,ಜೂ.20: ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಕಾವೇರಿ ನೀರಿನ ಹೆಚ್ಚುವರಿ ಹರಿವಿಗೆ ವಿಶೇಷ ದಾವೆ ಸಲ್ಲಿಸಿ ಸುಪ್ರೀಂಕೋರ್ಟ್ ನಿಂದ ಅನುಮತಿ ಪಡೆಯಲಾಗುವುದು ಎಂದು ಬೆಂಗಳೂರು ಉತ್ತರ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.
ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಿ ಮಾತನಾಡುತ್ತಿದ್ದ ಕಟ್ಟಾ, ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಜನಸಂಖ್ಯಾ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಾವೇರಿ ನೀರು ಸಾಕಾಗುತ್ತಿಲ್ಲ. ಹೀಗಾಗಿ ನಗರಕ್ಕೆ ಕುಡಿಯುವ ನೀರಿಗಾಗಿ ಹೆಚ್ಚಿನ ಕಾವೇರಿ ನೀರನ್ನು ಪಡೆಯಲು ಸುಪ್ರೀಂಕೋರ್ಟ್ ನಲ್ಲಿ ವಿಶೇಷ ದಾವೆ ಹೂಡುವುದಾಗಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications