ಟಿ20 ಫೈನಲ್ ನಲ್ಲಿ ಪಾಕ್ ,ಶ್ರೀಲಂಕಾ ಹಣಾಹಣಿ
ಓವಲ್, ಜೂ. 20: ಶುಕ್ರವಾರ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್ ತಂಡವನ್ನು ಭರ್ಜರಿ 57 ರನ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು. ಭಾನುವಾರ (ಜೂ 21) ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಪ್ರಶಸ್ತಿಗಾಗಿ ಸೆಣಸಲಿದೆ. ಒಟ್ಟಿನಲ್ಲಿ ಈ ಬಾರಿ ಕೂಡ ಟಿ20 ವಿಶ್ವಕಪ್ ಏಷ್ಯಾ ಖಂಡದಲ್ಲೇ ಉಳಿಯಲಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾಗೆ ಆರಂಭಿಕ ಆಟಗಾರರಾದ ತಿಲಕರತ್ನೆ ದಿಲ್ಶಾನ್ ಮತ್ತು ಜಯಸೂರ್ಯ 73 ರನ್ ಗಳ ಉತ್ತಮ ಅಡಿಪಾಯ ಹಾಕಿಕೊಟ್ಟರು. ಉತ್ತಮ ಆಟ ಪ್ರದರ್ಶಿಸಿದ ದಿಲ್ಶಾನ್ ನಾಲ್ಕು ರನ್ ಗಳಿಂದ ಶತಕ ವಂಚಿತರಾದರು. ಶ್ರೀಲಂಕಾ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ತನ್ನ ಮೊದಲ ಓವರ್ ನಲ್ಲೇ ಮೂರು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಾಯಕ ಕ್ರಿಸ್ ಗೇಲ್ ಮಾತ್ರ ಪ್ರತಿರೋಧ ತೋರಿ 63 ರನ್ ಗಳಿಸಿದರು. 17.4 ಓವರ್ ಗಳಲ್ಲಿ 101 ರನ್ ಗಳಿಸಲಷ್ಟೇ ಶಕ್ತವಾಗಿ ಸುಲಭವಾಗಿ ಶ್ರೀಲಂಕಾಗೆ ಶರಣಾಯಿತು. ಶ್ರೀಲಂಕಾ ಪರ ಮ್ಯಾಥೀವ್ಸ 3, ಉದಾನ ಮತ್ತು ಮಾಲಿಂಗ ತಲಾ ಒಂದೊಂದು ವಿಕೆಟ್ ಪಡೆದರೆ ಎಂದಿನಂತೆ ತಂಡದ 'ಫಿರ್ಕಿಗಳಾದ' ಮುರಳೀಧರನ್ (3)ಮತ್ತು ಅಜಂತಾ ಮೆಂಡಿಸ್ (2) ವಿಕೆಟ್ ಪಡೆದರು. ತಿಲಕರತ್ನೆ ದಿಲ್ಶಾನ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.
(ದಟ್ಸ್ ಕ್ರೀಡಾವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications