ರಾಜ್ಯ ಚುನಾವಣೆ ಆಯೋಗಕ್ಕೆ ಚಿಕ್ಕಮಠ ಆಯುಕ್ತ
ಬೆಂಗಳೂರು, ಜೂ.21: ರಾಜ್ಯ ಚುನಾವಣೆ ಆಯೋಗದ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಸಿಆರ್ ಚಿಕ್ಕಮಠ ನೇಮಕಗೊಂಡಿದ್ದಾರೆ. ಅಯುಕ್ತ ಎಂ ಆರ್ ಹೆಗಡೆ ಅವರ ಸ್ಥಾನವನ್ನು ಚಿಕ್ಕಮಠ ತುಂಬಲಿದ್ದಾರೆ. ಸರ್ಕಾರದ ಈ ಪ್ರಸ್ತಾವನೆಗೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅಂಕಿತ ಹಾಕಿದ್ದಾರೆ.
ಇಂದಿನಿಂದ 5 ವರ್ಷ ಅಥವಾ ಅಯುಕ್ತರಿಗೆ 65 ವರ್ಷ ತುಂಬುವದಾಲ್ಲಿ ಯಾವುದು ಮೊದಲೋ ಅಂದಿಗೆ ಅವಧಿ ಮುಕ್ತಾಯವಾಗಲಿದೆ. ಹಿರಿಯ ಐಎಎಸ್ ಅಧಿಕಾರಿ , ಕಾನೂನು ಕಾರ್ಯದರ್ಶಿ ಆಗಿರುವವರನ್ನು ಚುನಾವಣಾ ಆಯೋಗದ ಅಯುಕ್ತರನ್ನಾಗಿ ಆಯ್ಕೆ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ರೂಢಿ. ಅದೇ ರೀತಿ ಈಗ ಸರ್ಕಾರ ಚಿಕ್ಕಮಠ್ ಅವರ ಆಯ್ಕೆ ಮಾಡಿದೆ.
ರಾಜ್ಯದ ಐದನೇ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಚಿಕ್ಕಮಠ, ಮುಂದಿನ ಐದು ವರ್ಷಗಳ ಅವಧಿಯವರೆಗೆ ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. 1976 ರಲ್ಲಿ ಕೆಎಎಸ್ ಅಧಿಕಾರಿಯಾಗಿ ನೇಮಕ ಹೊಂದಿದ್ದ ಚಿಕ್ಕಮಠ, 1990 ರಲ್ಲಿ ಐಎಎಸ್ ಹುದ್ದೆಗೆ ಬಡ್ತಿ ಪಡೆದರು. ಆರಂಭದಲ್ಲಿ ಪಾಂಡವಪುರದಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ನೇಮಕ ಹೊಂದಿದ್ದ ಅವರು, ಬಳಿಕೆ ಮೈಷುಗರ್ಸ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ನವದೆಹಲಿಯಲ್ಲಿನ ಸ್ಥಾನಿಕ ಉಪ ಆಯುಕ್ತ ಮುಂತಾದ ಹುದ್ದೆಗಳನ್ನು ನಿರ್ವಹಿಸಿದ್ದರು.
ಐಎಎಸ್ ಗೆ ಬಡ್ತಿ ಪಡೆದ ಬಳಿಕ ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ತಂಬಾಕು ಮಂಡಳಿ, ರೇಷ್ಮೆ ಮಂಡಳಿ, ಕೈಗಾರಿಕೆ ಮತ್ತು ಅಬಕಾರಿ ಇಲಾಖೆಗಳ ಆಯುಕ್ತರಾಗಿದ್ದರು. ಚುನಾವಣಾ ಅಯುಕ್ತರಾಗುವ ಮುನ್ನ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications