ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ

ಇತ್ತೀಚೆಗೆ ಬೆಂಗಳೂರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವತಿಯಂದ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಕೂಡಾ ಸಾಮೂಹಿಕ ನಕಲು ಅಲ್ಲದೇ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳು ಕೂಡಾ ದುಡ್ಡಿಗಾಗಿ ಮಾರಿಕೊಳ್ಳಲಾಗುತ್ತಿರುವ ಸಮಗ್ರವಾದ ವರದಿಯೊಂದನ್ನು ಕಳೆದ ಶನಿವಾರ ಟಿವಿ 9 ಮತ್ತು ನ್ಯೂಸ್ 9 ವಾಹಿನಿಗಳು ಬಯಲಿಗೆ ಎಳೆದಿದ್ದವು. ಈ ಕೃತ್ಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.
ಇಂದು ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ಸತ್ಯಜ್ಯೋತಿ ಸಂಸ್ಥೆಯಲ್ಲಿ ಬಿಕಾಂ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆಯಲ್ಲಿ ಸುಮಾರು 33 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳೆಲ್ಲ ಸಾಮೂಹಿಕ ನಕಲಿನಲ್ಲಿ ತೊಡಗಿದ್ದರು. ಬೆಂಗಳೂರು ವಿವಿಯಿಂದ ತೆರಳಿದ್ದ ಪರೀಕ್ಷೆ ಮೇಲ್ವಿಚಾರಕ ಬಿರಾದಾರ್ ಎಂಬುವವರ ಸಮಕ್ಷಮದಲ್ಲೇ ವಿದ್ಯಾರ್ಥಿಗಳು ಗೈಡ್, ಪುಸ್ತಕಗಳನ್ನು ತೆಗೆದುಕೊಂಡು ಪರೀಕ್ಷೆ ಬರೆಯುತ್ತಿದ್ದರು.
ಇದನ್ನು ಅರಿತ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪರೀಕ್ಷಾ ಕೇಂದ್ರಕ್ಕೆ ದಾಳಿ ನಡೆಸಿದ್ದಲ್ಲ, ಮೇಲ್ವಿಚಾರಕ ಬಿರಾದಾರ್ ಹಾಗೂ ಸತ್ಯಜ್ಯೋತಿ ಕಾಲೇಜಿನ ಪ್ರಾಚಾರ್ಯ ಬಾಲಕೃಷ್ಣ ಎಂಬುವವರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಅವರನ್ನ ಮೈಸೂರಿನ ದೇವರಾಜ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪರೀಕ್ಷಾ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ತಲಾ 2000 ರುಪಾಯಿಗಳನ್ನು ಪಡೆದುಕೊಂಡು ನಕಲು ಮಾಡಲು ಅವಕಾಶ ಮಾಡಿಕೊಟ್ಟಿದ್ದರು ಎಂಬ ದೂರು ಕೇಳಿಬಂದಿದೆ.
(ದಟ್ಸ್ ಕನ್ನಡ ವಾರ್ತೆ)
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications