ಪಾಕಿಸ್ತಾನ ಮಡಿಲಿಗೆ ಟ್ವೆಂಟಿ-20 ವಿಶ್ವಕಪ್
ಲಾರ್ಡ್ಸ್, ಜೂ. 22 : ಪಾಕಿಸ್ತಾನ ತಂಡ ಎರಡನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಷಿಪ್ ನಲ್ಲಿ ಪ್ರಶಸ್ತಿಯ ಒಡೆಯನಾಗಿದೆ. ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ಪಂದ್ಯದ ಮೊದಲ ಓವರ್ ನಲ್ಲೇ ಎರಡು ವಿಕೆಟ್ ಕಳೆದುಕೊಂಡಿತು. ಸರಣಿಯಲ್ಲಿ ಪ್ರಚಂಡ ಫಾರಂನಲ್ಲಿದ್ದ ದಿಲ್ಸಾನ್ ಮತ್ತು ಮುಬಾರಕ್ ಯಾವುದೇ ರನ್ ಗಳಿಸದೆ ಪೆವಲಿನ್ ಮರಳಿದರು. ನಾಯಕನ ಆಟವಾಡಿದ ಸಂಗಕ್ಕಾರ್ 64 ಗಳಿಸಿದರು. ಜಯಸೂರ್ಯ 17, ಮ್ಯಾಥೀವ್ಸ್ 35 ರನ್ ಗಳಿಸಿದರು. ಶ್ರೀಲಂಕಾ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಪಾಕ್ ಪರ ರಜಾಕ್ 3, ಅಮೀರ್, ಆಫ್ರೀದಿ ಮತ್ತು ಉಮರ್ ಗುಲ್ ತಲಾ ಒಂದೊಂದು ವಿಕೆಟ್ ಪಡೆದರು.
139 ರನ್ ಗಳ ಗುರಿ ಬೆನ್ನಟ್ಟಿದ ಪಾಕ್ ಇನ್ನೂ 1.2 ಓವರ್ ಬಾಕಿ ಇರುತ್ತಲೇ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಸಮಯೋಜಿತ ಆಟ ಪ್ರದರ್ಶಿಸಿದ ಆಫ್ರಿದಿ ಅಜೇಯ 54 ರನ್ ಗಳಿಸಿದರು. ಅಕ್ಮಲ್ 37, ಹಸನ್ 19 ಮತ್ತು ಮಲಿಕ್ ಅಜೇಯ 24 ರನ್ ಗಳಿಸಿದರು. ಆಲ್ರೌಂಡರ್ ಆಟ ಪ್ರದರ್ಶಿಸಿದ ಆಫ್ರಿದಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು. ಶ್ರೀಲಂಕಾ ಆಟಗಾರ ತಿಲಕರತ್ನೆ ದಿಲ್ಸಾನ್ ಸರಣಿಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
(ಏಜನ್ಸೀಸ್)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications