ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಶೋಕ್ ಹಾರನಹಳ್ಳಿ ನೂತನ ಎಜಿ

By Staff
|
Google Oneindia Kannada News

ಬೆಂಗಳೂರು, ಜೂ. 23 : ಉದಯ್ ಹೊಳ್ಳ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಸ್ಥಾನಕ್ಕೆ ಅಶೋಕ ಹಾರನಹಳ್ಳಿ ಅವರ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ಸೋಮವಾರ ಅಶೋಕ ಹಾರನಹಳ್ಳಿ ಅವರ ರಾಜ್ಯದ ಅಡ್ವೋಕೇಟ್ ಜನರಲ್ ಎಂಬ ಆದೇಶವನ್ನು ಹೊರಡಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಉದಯ್ ಹೊಳ್ಳ ಅಡ್ವೋಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ ರಾಜ್ಯದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಬಿಜೆಪಿ ಸರಕಾರ ನೇಮಿಸಿತ್ತು. ಅದು ಕೂಡಾ ಹೊಳ್ಳ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಅಶೋಕ್ ಹಾರನಹಳ್ಳಿ ಅವರು ಮಾಜಿ ಸಚಿವ ಹಾರನಹಳ್ಳಿ ರಾಮಸ್ವಾಮಿ ಮಗನಾಗಿದ್ದಾರೆ. ಕಳೆದ 25 ವರ್ಷಗಳಿಂದ ರಾಜ್ಯ ಹೈಕೋರ್ಟ್ ನಲ್ಲಿ ನ್ಯಾಯಾವಾದಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಆಗಿದ್ದ ಬಿ ವಿ ಆಚಾರ್ಯ ಅವರ ಕೈಯಲ್ಲಿ ಅಶೋಕ್ ಹಾರನಹಳ್ಳಿ ಅನುಭವ ಪಡೆದುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X