ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಖಂಡ ಮುಖ್ಯಮಂತ್ರಿ ಖಂಡೂರಿ ರಾಜೀನಾಮೆ

By Staff
|
Google Oneindia Kannada News

BC Khanduri
ನವದೆಹಲಿ, ಜೂ. 23 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉತ್ತರಖಂಡ ರಾಜ್ಯದಲ್ಲಿ ಬಿಜೆಪಿ ಸೋತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಉತ್ತರಖಂಡ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಖಂಡೂರಿ ಅವರ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ aಸ್ವೀಕರಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಖಂಡೂರಿ ವಿಫಲರಾಗಿದ್ದರು. ಇಂದು ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಿವಾಸದಲ್ಲಿ ನಡೆದ ಬಿಜೆಪಿ ಮಹತ್ವದ ಸಭೆಯಲ್ಲಿ ಖಂಡೂರಿ ಅವರ ರಾಜೀನಾಮೆ ಪಡೆಯುವ ನಿರ್ಧಾರ ಕೈಗೊಳ್ಳಲಾಯಿತು. ಖಂಡೂರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಾಜನಾಥ್ ಸಿಂಗ್ ಸೂಚಿಸಿದ್ದರು.

ಉತ್ತರಖಂಡದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಾರಿ ಲಾಬಿ ನಡೆಯುತ್ತಿದ್ದು, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಕಾಶ್ ಪಂತ್ ಮತ್ತು ಆರೋಗ್ಯ ಸಚಿವ ರಮೇಶ್ ಪೋಕ್ರಿಯಾಲ್ ಅವರ ಹೆಸರು ಪ್ರಮುಖವಾಗಿ ಕೇಳಿಬರತೊಡಗಿವೆ. ಸೋಲಿನ ಹೊಣೆ ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಇನ್ನೊಬ್ಬ ಮುಖಂಡ ಬಿ ಎಸ್ ಕೋಶಿಯಾರಿ ಅವರ ಖಂಡೂರಿ ವಿರುದ್ಧ ಬಂಡಾಯವೆದ್ದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ಆದೇಶದ ಮೇರೆಗೆ ಶುಕ್ರವಾರ ತಮ್ಮ ರಾಜೀನಾಮೆ ವಾಪಸ್ಸು ಪಡೆದುಕೊಂಡಿದ್ದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X