ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್
ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಒಂದು ವರ್ಷದ ಅವಧಿಯಲ್ಲಿ ತಮ್ಮ ಇಲಾಖೆಯಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಮುಖ್ಯಮಂತ್ರಿ ಸೇರಿ ಎಲ್ಲರಿಗೂ ಪತ್ರ ಬರೆಯಲಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ಬಂದ ನಂತರ ಅದನ್ನೆಲ್ಲ ಕ್ರೋಢಿಕರಿಸಿ ಪಕ್ಷದ ವರಿಷ್ಠರಿಗೆ ನೀಡುವುದಾಗಿ ಸದಾನಂದಗೌಡ ಹೇಳಿದರು.
ವಿಧಾನ ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಈಗ ಸಚಿವ ಸಂಪುಟದಲ್ಲಿ ಯಾವುದೇ ಸ್ಥಾನಗಳು ಖಾಲಿ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರು ಬಿಜೆಪಿ ವಿರುದ್ಧ ಮಾಡುತ್ತಿರುವ ಟೀಕೆಗಳ ಪ್ರತಿಕ್ರಿಯಿಸಲು ನಿರಾಕರಿಸಿದ ಸದಾನಂದಗೌಡ, ಇವರ ಹೇಳಿಕೆಗಳ ಬಗ್ಗೆ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಮೌನ ವಹಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
Story first published: Tuesday, June 23, 2009, 17:32 [IST]