ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್

By Staff
|
Google Oneindia Kannada News

DV Sadananda gowda
ಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಒಂದು ವರ್ಷದ ಅವಧಿಯಲ್ಲಿ ತಮ್ಮ ಇಲಾಖೆಯಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಮುಖ್ಯಮಂತ್ರಿ ಸೇರಿ ಎಲ್ಲರಿಗೂ ಪತ್ರ ಬರೆಯಲಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ಬಂದ ನಂತರ ಅದನ್ನೆಲ್ಲ ಕ್ರೋಢಿಕರಿಸಿ ಪಕ್ಷದ ವರಿಷ್ಠರಿಗೆ ನೀಡುವುದಾಗಿ ಸದಾನಂದಗೌಡ ಹೇಳಿದರು.

ವಿಧಾನ ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಈಗ ಸಚಿವ ಸಂಪುಟದಲ್ಲಿ ಯಾವುದೇ ಸ್ಥಾನಗಳು ಖಾಲಿ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರು ಬಿಜೆಪಿ ವಿರುದ್ಧ ಮಾಡುತ್ತಿರುವ ಟೀಕೆಗಳ ಪ್ರತಿಕ್ರಿಯಿಸಲು ನಿರಾಕರಿಸಿದ ಸದಾನಂದಗೌಡ, ಇವರ ಹೇಳಿಕೆಗಳ ಬಗ್ಗೆ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಮೌನ ವಹಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X