ಜುಲೈ 22 ಕ್ಕೆ ಸರಕಾರ ಪತನ : ವರ್ತೂರು

Varthur Prakash
ಬೆಂಗಳೂರು, ಜೂ. 23 : ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮದ ವಿರುದ್ದ ಬಂಡೆದ್ದು ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಶಾಸಕ ವರ್ತೂರು ಪ್ರಕಾಶ್ ವಾಪಾಸ್ ಪಡೆದಿದ್ದಾರೆ.

ಜುಲೈ 22 ಅಮಾವಾಸ್ಯೆಯ ದಿನದಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಪತನಗೊಳ್ಳಲಿದೆ. ಸರಕಾರ ಸುಭದ್ರವಾಗಿದೆ ಎಂದು ಯಡಿಯೂರಪ್ಪ ನಂಬಿದ್ದಾರೆ. ಆದರೆ ಅವರ ಗ್ರಹಗತಿ ಚೆನ್ನಾಗಿಲ್ಲ. ಬಳ್ಳಾರಿ ರೆಡ್ಡಿ ಸಹೋದರರ ಬೆಂಬಲಿಗರ ಸಂಖ್ಯಾಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರಕಾರ ಉರುಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಮುಖ್ಯಮಂತ್ರಿ ಪುತ್ರ ರಾಘವೇಂದ್ರ, ಸಚಿವೆ ಶೋಭಾ ಕರಂದ್ಲಾಜೆ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ ಬೊಮ್ಮಾಯಿ ಮತ್ತು ಉದಾಸಿಯವರಿಗೆ ಮಾತ್ರ ಸರಕಾರ ಸೀಮಿತವಾಗಿದೆ. ಲಿಂಗಾಯಿತರನ್ನು ಬಿಟ್ಟು ಮುಖ್ಯಮಂತ್ರಿಗಳು ಬೇರೆಯವರನ್ನು ಕಣ್ಣೆತ್ತಿ ನೋಡುತ್ತಿಲ್ಲ. ಬಿಜೆಪಿಯ ಹಲವು ಶಾಸಕರು ಕೆಲಸ ಮಾಡಲಾಗದೆ ಒದ್ದಾಡುತ್ತಿದ್ದಾರೆ. ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷನಾಗಿದ್ದರೂ ಸಿಎಂ ಮತ್ತವರ ಕುಟುಂಬದವರ ಹಸ್ತಕ್ಷೇಪದಿಂದ ಕಳೆದ ಒಂದು ವರ್ಷದಲ್ಲಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+