ಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನದ ಸುಪ್ರಿಂಕೋರ್ಟ್ ನ ನ್ಯಾಯಮೂರ್ತಿ ರಾಜಾ ಫಯ್ಯಾಜ್ ಅಹ್ಮದ್ ನೇತೃತ್ವದ ಮೂವರನ್ನು ಒಳಗೊಂಡ ಪೀಠ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಪುನರ್ ಪರಿಶೀಲನೆ ಅರ್ಜಿಯನ್ನು ತಿರಸ್ಕರಿಸಿದೆ.1991ರಲ್ಲಿ ಪಾಕಿಸ್ತಾನದಲ್ಲಿ ನಡೆದ ಬಾಂಬ್ ಸ್ಫೊಟ ಕೃತ್ಯದಲ್ಲಿ ಸರಬ್ಜೀತ್ ಸಿಂಗ್ ಪಾತ್ರ ಇರುವುದು ಸಾಬೀತಾಗಿದ್ದು, ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನೀಡಿದ ಮರಣದಂಡನೆ ಶಿಕ್ಷೆಯನ್ನೇ ಪಾಕ್ ಸುಪ್ರಿಂಕೋರ್ಟ್ ಎತ್ತಿಹಿಡಿದಿದೆ. ಸರಬ್ಜೀತ್ ಸಿಂಗ್ ಪರ ವಕೀಲ ಕಳೆದ ದಿನಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಸರಬ್ಜೀತ್ ಸಿಂಗ್ ಮರಣ ದಂಡನೆ ಶಿಕ್ಷೆಯನ್ನು ನ್ಯಾಯಾಲಯ ಖಾಯಂಗೊಳಿಸಿದೆ. ರಾಣಾ ಅಬ್ಧುಲ್ ಹಮೀದ್ ಎಂಬ ವಕೀಲರು ಸರಬ್ಜೀತ್ ಸಿಂಗ್ ಪರ ವಾದಿಸುತ್ತಿದ್ದರು. ಪಾಕಿಸ್ತಾನದ ಪಂಜಾಬ್ ಸರಕಾರ ಅವರನ್ನು ನೇಮಿಸಿತ್ತು.
ಕಳೆದ ವರ್ಷ ಏಪ್ರಿಲ್ ನಲ್ಲಿಯೇ ಸರಬ್ಜೀತ್ ಸಿಂಗ್ ಅವರನ್ನು ನೇಣಿಗೇರಿಸಬೇಕಿತ್ತು. ಆದರೆ, ಪಾಕ್ ಪ್ರಧಾನಿ ಯೂಸೆಫ್ ರಾಜಾ ಗಿಲಾನಿ ಮಧ್ಯೆ ಪ್ರವೇಶದಿಂದ ಶಿಕ್ಷೆ ನೀಡುವ ಸಮಯ ಅನಿರ್ಧಿಷ್ಟಾವಧಿ ಮುಂದೂಡಲಾಗಿತ್ತು. 2003ರಲ್ಲಿ ಲಾಹೋರ್ ಹೈಕೋರ್ಟ್ ಸರಬ್ಜೀತ್ ಸಿಂಗ್ ಗೆ ಮರಣ ದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 2005 ರಲ್ಲಿ ಪಾಕ್ ಸುಪ್ರಿಂಕೋರ್ಟ್ ಲಾಹೋರ್ ಕೋರ್ಟ್ ನ ಆದೇಶವನ್ನು ಎತ್ತಿಹಿಡಿದಿತ್ತು. ಕ್ಷಮಾದಾನ ನೀಡಬೇಕೆಂದು ಸರಬ್ಜೀತ್ ಸಿಂಗ್ ಪಾಕ್ ಅಂದಿನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಸಲ್ಲಿಸಿದ್ದ ಅರ್ಜಿಯನ್ನು ಅವರ ತಿರಸ್ಕರಿಸಿದ್ದರು.
(ಏಜನ್ಸೀಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications