ಸರಬ್ಜೀತ್ ಗೆ ಗಲ್ಲು ಖಾಯಂಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನದ ಸುಪ್ರಿಂಕೋರ್ಟ್ ನ ನ್ಯಾಯಮೂರ್ತಿ ರಾಜಾ ಫಯ್ಯಾಜ್ ಅಹ್ಮದ್ ನೇತೃತ್ವದ ಮೂವರನ್ನು ಒಳಗೊಂಡ ಪೀಠ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಪುನರ್ ಪರಿಶೀಲನೆ ಅರ್ಜಿಯನ್ನು ತಿರಸ್ಕರಿಸಿದೆ.1991ರಲ್ಲಿ ಪಾಕಿಸ್ತಾನದಲ್ಲಿ ನಡೆದ ಬಾಂಬ್ ಸ್ಫೊಟ ಕೃತ್ಯದಲ್ಲಿ ಸರಬ್ಜೀತ್ ಸಿಂಗ್ ಪಾತ್ರ ಇರುವುದು ಸಾಬೀತಾಗಿದ್ದು, ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನೀಡಿದ ಮರಣದಂಡನೆ ಶಿಕ್ಷೆಯನ್ನೇ ಪಾಕ್ ಸುಪ್ರಿಂಕೋರ್ಟ್ ಎತ್ತಿಹಿಡಿದಿದೆ. ಸರಬ್ಜೀತ್ ಸಿಂಗ್ ಪರ ವಕೀಲ ಕಳೆದ ದಿನಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಸರಬ್ಜೀತ್ ಸಿಂಗ್ ಮರಣ ದಂಡನೆ ಶಿಕ್ಷೆಯನ್ನು ನ್ಯಾಯಾಲಯ ಖಾಯಂಗೊಳಿಸಿದೆ. ರಾಣಾ ಅಬ್ಧುಲ್ ಹಮೀದ್ ಎಂಬ ವಕೀಲರು ಸರಬ್ಜೀತ್ ಸಿಂಗ್ ಪರ ವಾದಿಸುತ್ತಿದ್ದರು. ಪಾಕಿಸ್ತಾನದ ಪಂಜಾಬ್ ಸರಕಾರ ಅವರನ್ನು ನೇಮಿಸಿತ್ತು.
ಕಳೆದ ವರ್ಷ ಏಪ್ರಿಲ್ ನಲ್ಲಿಯೇ ಸರಬ್ಜೀತ್ ಸಿಂಗ್ ಅವರನ್ನು ನೇಣಿಗೇರಿಸಬೇಕಿತ್ತು. ಆದರೆ, ಪಾಕ್ ಪ್ರಧಾನಿ ಯೂಸೆಫ್ ರಾಜಾ ಗಿಲಾನಿ ಮಧ್ಯೆ ಪ್ರವೇಶದಿಂದ ಶಿಕ್ಷೆ ನೀಡುವ ಸಮಯ ಅನಿರ್ಧಿಷ್ಟಾವಧಿ ಮುಂದೂಡಲಾಗಿತ್ತು. 2003ರಲ್ಲಿ ಲಾಹೋರ್ ಹೈಕೋರ್ಟ್ ಸರಬ್ಜೀತ್ ಸಿಂಗ್ ಗೆ ಮರಣ ದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 2005 ರಲ್ಲಿ ಪಾಕ್ ಸುಪ್ರಿಂಕೋರ್ಟ್ ಲಾಹೋರ್ ಕೋರ್ಟ್ ನ ಆದೇಶವನ್ನು ಎತ್ತಿಹಿಡಿದಿತ್ತು. ಕ್ಷಮಾದಾನ ನೀಡಬೇಕೆಂದು ಸರಬ್ಜೀತ್ ಸಿಂಗ್ ಪಾಕ್ ಅಂದಿನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಸಲ್ಲಿಸಿದ್ದ ಅರ್ಜಿಯನ್ನು ಅವರ ತಿರಸ್ಕರಿಸಿದ್ದರು.
(ಏಜನ್ಸೀಸ್)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications