ಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ
ಬೆಂಗಳೂರು,
ಜೂ. 24 : ರಾಜ್ಯದ ವಿವಿಧೆಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಸರಿನ ಬಡಾವಣೆಗಳು ನಿರ್ಮಾಣವಾಗಲಿವೆ. ಇತ್ತೀಚೆಗೆ ಸಚಿವ ಸಂಪುಟ ಸೇರಿರುವ ವಸತಿ ಖಾತೆ ಸಚಿವ ವಿ ಸೋಮಣ್ಣ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಶಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಮೊದಲು ಚಾಮರಾಜನಗರ ಜಿಲ್ಲೆಯಲ್ಲಿ ಯಡಿಯೂರಪ್ಪ ಹೆಸರಿನ ಬಡಾವಣೆ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ. id="toptextpromo">ಚಾಮರಾಜನಗರ
ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಗೃಹ ನಿರ್ಮಾಣ ಮಂಡಳಿಯ ಬಡಾವಣೆಗೆ ಯಡಿಯೂರಪ್ಪ ಅವರ ಹೆಸರನ್ನಿಡುವ ತೀರ್ಮಾನ ಪ್ರಕಟಿಸಿದ್ದು, ಈ ಕಾಮಗಾರಿಯನ್ನು ಬರುವ ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅವರು ಮಂಡಳಿಯ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಮಂಗಳವಾರ ರಾತ್ರಿ ಗೃಹ ನಿರ್ಮಾಣ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸೋಮಣ್ಣ, ನಂತರ ತರಾತುರಿಯಲ್ಲಿ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ ಅವರೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications