Get Updates
Get notified of breaking news, exclusive insights, and must-see stories!

ಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು

Mukhyamantri Chandru in Shivamogga
ಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ ಹಾಗೂ ಭಾಷೆಯನ್ನು ಉಳಿಸಲು ಕನ್ನಡ ಭಾಷೆಯನ್ನು ಕಡ್ಡಾಯ ಮಾಡಬೇಕೆಂದರಲ್ಲದೆ, ದೇಶವು ಭಾಷಾವಾರು ಪ್ರಾಂತ್ಯವಾಗಿ ವಿಂಗಡಣೆಯಾಗಿದ್ದು, ಆಡಳಿತಾತ್ಮಕವಾಗಿ, ಸುಲಭವಾಗಿ ಸರ್ಕಾರದ ಸೌಲಭ್ಯ ಹಾಗೂ ಕಾನೂನಿನ ಅರಿವಾಗಲೆಂದು ಅಲ್ಲಿನ ಪ್ರಾಂತ್ಯವಾರು ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಪರಿಗಣಿಸಲಾಗಿದೆ ಎಂದರು.

ರಾಜ್ಯದ ಹಲವೆಡೆ ಕನ್ನಡ ಭಾಷೆಯ ಉಲ್ಲಂಘನೆ ನಡೆಯುತ್ತಿದೆ. ಸಾರ್ವಜನಿಕರು ತಪ್ಪು ಮಾಡಿದರೆ ಶಿಕ್ಷೆಯಾಗುತ್ತಿದ್ದು, ಅಧಿಕಾರಗಳ ಮಟ್ಟದಲ್ಲಿ ತಪ್ಪು ಮಾಡಿದರೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಸಾಂಸ್ಕೃತಿಕ ಮತ್ತು ಸುಸಂಸ್ಕೃತಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಈ ರೀತಿಯ ಕನ್ನಡ ಭಾಷೆಯ ಮೇಲೆ ತಾತ್ಸಾರ ತೋರುತ್ತಿರುವುದು ಎದ್ದು ಕಾಣುತ್ತಿದೆ ಎಂದರು.

ಸರ್ಕಾರಿ ಇಲಾಖೆಯ ಹಲವು ವಾಹನಗಳ ಮೇಲೆ ಆಂಗ್ಲ ಭಾಷೆಯಲ್ಲಿಯೇ ನೋಂದಣಿ ಸಂಖ್ಯೆಯನ್ನು ಬರೆದಿದ್ದು, ಜುಲೈ 15ರೊಳಗಾಗಿ ನಾಮಫಲಕ ಬದಲಾವಣೆಯಾಗಬೇಕೆಂದು ಸೂಚಿಸಿದರು. ಹಾಗೆಯೇ, ಎಲ್ಲಾ ರೀತಿಯ ನಾಮಫಲಕಗಳು ಕನ್ನಡ ಭಾಷೆಯಲ್ಲಿರಬೇಕು. ಇದನ್ನು ಉಲ್ಲಂಘಿಸಿದವರಿಗೆ 10 ಸಾವಿರ ರೂ. ದಂಡದ ಜೊತೆಗೆ ಪರವಾನಿಗೆ ರದ್ದುಪಡಿಸಬೇಕೆಂದು ಹೇಳಿದರು.

ಯಾವುದೇ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಬೇಕು. ಜೊತೆಗೆ, ಕನ್ನಡ ಭಾಷೆಯ ನಾಮಫಲಕ ಬರೆಸುವಂತೆ ಕಂಪನಿಗಳ ಮನಪರಿವರ್ತನೆ ಮಾಡಬೇಕು. ಹೀಗಾಗಿ, ಅಧಿಕಾರಿಗಳು ನಾಮಫಲಕದ ಬಗ್ಗೆ ಗಂಭೀರ ಚಿಂತನೆ ಮಾಡಬೇಕೆಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾ ರಕ್ಷಣಾಧಿಕಾರಿ ಎಸ್.ಮುರುಘನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಚಂದ್ರ, ಹಲವು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+