ಅಗಸ್ಟ್ ನಿಂದ ರಾಜಾಜಿನಗರ ಕಾರಿಡಾರ್ ಆರಂಭ
ಬೆಂಗಳೂರು, ಜೂ. 25 : ಬಹುನಿರೀಕ್ಷಿತ ರಾಜಾಜಿನಗರ ಕಾರಿಡಾರ್ ಯೋಜನೆಯ ಕಾಮಗಾರಿ ಬರುವ ಆಗಸ್ಟ್ನಲ್ಲಿ ಆರಂಭವಾಗಲಿದೆ. ಮೊದಲ ಹಂತದಲ್ಲಿ ಫೌಂಟೇನ್ ಸರ್ಕಲ್ನಿಂದ ಓಕಳಿಪುರಂವರೆಗಿನ ಎಂಟು ಪಥದ ಸ್ಕೈ ನಿರ್ಮಾಣವನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಟೆಂಡರ್ ಕರೆಯುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಜುಲೈನಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಸ್.ಸುರೇಶ್ಕುಮಾರ ಹೇಳಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿದ ನಂತರ ಈ ವಿಚಾರವನ್ನು ಪ್ರಕಟಿಸಿದ್ದರು. ಕಾರಿಡಾರ್ ನಿರ್ಮಾಣದ ಬಗ್ಗೆ ರೂಪಿಸಲಾಗಿದ್ದ ಪ್ರಾತ್ಯಕ್ಷಿಕೆಯನ್ನು ಬಿ.ಬಿ.ಎಂ.ಪಿ. ಆಯುಕ್ತ ಭರತ್ಲಾಲ್ ಮೀನಾ ಅವರೊಂದಿಗೆ ವೀಕ್ಷಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿ ಈ ಯೋಜನೆಯಿಂದಾಗಿ ಕೆ.ಆರ್.ಸರ್ಕಲ್, ಆನಂದರಾವ್ ಸರ್ಕಲ್, ಮಧ್ಯ ಬೆಂಗಳೂರು ಪ್ರದೇಶಗಳಿಂದ ರಾಜಾಜಿನಗರಕ್ಕೆ ಬರುವ ವಾಹನಗಳಿಗೆ ಅನುಕೂಲವಾಗುತ್ತದೆ. 46 ಕೋಟಿ ರೂಪಾಯಿಗಳನ್ನು ಈ ಯೋಜನೆಗಾಗಿ ಖರ್ಚು ಮಾಡಲಾಗುತ್ತದೆ. ಕಾಮಗಾರಿಯನ್ನು ಕಡ್ಡಾಯವಾಗಿ 6 ತಿಂಗಳ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.
ಈ ಯೋಜನೆಯ ಅನುಷ್ಠಾನಕ್ಕೆ ಓಕಳಿಪುರಂ ಬಳಿ ರೈಲ್ವೆ ಇಲಾಖೆಗೆ ಸೇರಿದ 12818 ಚದರ ಮೀಟರ್ ಭೂಮಿ ಅಗತ್ಯವಾಗಿದ್ದು, ಈ ಸಂಬಂಧ ರೈಲ್ವೆ ಇಲಾಖೆಯ ಮುಖ್ಯಸ್ಥರ ಜೊತೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಅಲ್ಲಿಂದ ನಮಗೆ ಸಕಾರಾತ್ಮಕ ಉತ್ತರ ಬಂದಿದ್ದು ಬದಲೀ ಭೂಮಿಯನ್ನು ನೀಡುವಂತೆ ಅವರು ಕೋರಿದ್ದಾರೆ ಎಂದು ಸಚಿವರು ತಿಳಿಸಿದರು.
ರಾಜಾಜಿನಗರ ಕಾರಿಡಾರ್ ಯೋಜನೆಯ ವ್ಯಾಪ್ತಿಯಲ್ಲಿ ಡಾ.ರಾಜ್ಕುಮಾರ್ ರಸ್ತೆಯ ನಾಲ್ಕು ಜಂಕ್ಷನ್ಗಳಲ್ಲಿ ಅಂಡರ್ ಪಾಸ್ಗಳ ನಿರ್ಮಾಣ ಮಾಡಲಾಗುತ್ತದೆ. ಮಂಜುನಾಥನಗರ ಮುಖ್ಯ ರಸ್ತೆ ಜಂಕ್ಷನ್, ಶಿವನಗರದ ಮೊದಲನೇ ಮುಖ್ಯ ರಸ್ತೆ ಜಂಕ್ಷನ್, ಶಿವನಗರದ 8ನೇ ಮುಖ್ಯರಸ್ತೆ ಜಂಕ್ಷನ್ ಹಾಗೂ ಬಸವೇಶ್ವರನಗರ ಮೊದಲನೇ ಮುಖ್ಯರಸ್ತೆ ಜಂಕ್ಷನ್ನಲ್ಲಿ ಈ ಅಂಡರ್ ಪಾಸ್ಗಳನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ಅದನ್ನು ಸಿಗ್ನಲ್ ಫ್ರೀ ರಸ್ತೆಗಳನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಡಾ.ರಾಜ್ಕುಮಾರ್ ರಸ್ತೆ ಹಾಗೂ ಸಿದ್ಧಯ್ಯ ಪುರಾಣಿಕ್ ರಸ್ತೆಗಳನ್ನೂ ಸಹ ಸಿಗ್ನಲ್ ಫ್ರೀ ರಸ್ತೆಗಳನ್ನಾಗಿ ಮಾಡಲಾಗುತ್ತದೆ. ಈ ಕಾರಿಡಾರ್ ಗಾಗಿ ಮೂರು ರೀತಿಯ ವಿವಿಧ ವಿನ್ಯಾಸಗಳನ್ನು ರೂಪಿಸಲಾಗಿದ್ದು ಫ್ಲೈಓವರ್, ಅಂಡರ್ ಪಾಸ್ ಹಾಗೂ ಮೇಲ್ಮೈ ರಸ್ತೆ ಮೂರನ್ನೂ ಒಳಗೊಂಡಿರುತ್ತದೆ. ಈ ಕಾಮಗಾರಿ ಸುಗಮವಾಗಿ ಮುಗಿಯಲು ಅನುಕೂಲವಾಗುವಂತೆ ಮುಂದಿನವಾರದಲ್ಲಿ ರೈಲ್ವೆ ಇಲಾಖೆ ಹಾಗೂ ಮೆಟ್ರೋ ಅಧಿಕಾರಿಗಳ ಜೊತೆ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications