ಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ

ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು ಕೋಮುಗಲಭೆಗೆ ಒಳಗಾಗಿದ್ದ ಕಂದಮಾಲ್ ಮತ್ತು ಪುಲ್ಬನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು. ಘಟನೆಗೆ ಹೆದರಿ ಜೀವ ಭಯದಿಂದ ಗ್ರಾಮಗಳನ್ನು ತೊರೆದಿರುವ ಎಲ್ಲ ಕ್ರಿಶ್ಚಿಯನ್ ರು ಮರಳಿ ಸ್ವಗ್ರಾಮಗಳಿಗೆ ಆಗಮಿಸಬೇಕು. ಅದಕ್ಕೆ ಬೇಕಿರುವ ಸಕಲ ವ್ಯವಸ್ಥೆಯನ್ನು ಕೇಂದ್ರ ಸರಕಾರ ಮಾಡಲಿದೆ. ಘಟನೆ ಸಂಬಂಧಿಸಿದಂತೆ ನಮಗೆ ಕೂಡಾ ತುಂಬಾ ನೋವಾಗಿದೆ. ನಮ್ಮ ತಪ್ಪಾಗಿದ್ದರೆ ಮನ್ನಿಸಿ, ನಿಮಗೆ ಸೂಕ್ತ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದು ಅವರು ವಿವರಿಸಿದ್ದಾರೆ.
ಘಟನೆಯಲ್ಲಿ ತಪ್ಪೆಸಗಿರುವ ಆರೋಪಿಗಳಿಗೆ ಖಂಡಿತವಾಗಿಯೂ ಶಿಕ್ಷೆ ಆಗಲಿದೆ. ಕಾನೂನು ಕೈಗೆ ತೆಗೆದುಕೊಂಡಿರುವವರು ಯಾರೇ ಆದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ಚಿದು, ನಿಮ್ಮಲ್ಲಿ ವಿಶ್ವಾಸ ಭಾವನೆ ಮೂಡಿಸುವುದು. ನಿಮ್ಮ ಸುರಕ್ಷಿತ ಕಾಪಾಡುವುದು ನಮ್ಮ ಹೊಣೆಗಾರಿಕೆ. ಅದರಿಂದ ನಾವು ಪಲಾಯನ ಮಾಡುವುದಿಲ್ಲ ಎಂದರು.
ವಿಶ್ವ ಹಿಂದೂ ಪರಿಷತ್ ಮುಖಂಡ ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಅವರನ್ನು ಮಾವೋವಾದಿಗಳು ಹತ್ಯೆಗೈದಿದ್ದರು. ಇದರಿಂದ ರೊಚ್ಚಿಗೆದ್ದ ವಿಎಚ್ ಪಿ ಕಾರ್ಯಕರ್ತರು ಕ್ರಿಶ್ಚಿಯನ್ನರೆ ಹತ್ಯೆಗೆ ಕಾರಣ ಎಂದು ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ ಚರ್ಚ್ ಗಳನ್ನು ಒಡೆದು ಹಾಕಿದ್ದರು. ಘಟನೆಯಲ್ಲಿ 38 ಮಂದಿ ಸಾವನ್ನಪ್ಪಿದ್ದರು. ಕಂದಮಾಲ್ ನ ಚರ್ಚ್ ನಲ್ಲಿದ್ದ ಸಿಸ್ಟರ್ ವೊಬ್ಬರನ್ನು ಜೀವಂತ ದಹನ ಮಾಡಿದ ಪೈಶಾಚಿಕೆ ಪ್ರಸಂಗ ನಡೆದು ಹೋಗಿತ್ತು. ಒಂದು ವಾರಗಳ ಕಾಲ ಒರಿಸ್ಸಾದ ಕಂದಮಾಲ್ ಹಾಗೂ ಪುಲ್ಬನಿ ನಗರಗಳಲ್ಲಿ ಅಕ್ಷರಶಃ ಮಾರಣಹೋಮದ ಕೇಂದ್ರಗಳಾದ ಪರಿವರ್ತನೆಯಾಗಿದ್ದವು. ಅನೇಕ ಕ್ರಿಶ್ಚಿಯರು ಜೀವ ಭಯದಿಂದ ಇತರೆ ರಾಜ್ಯಗಳಿಗೆ ಪಲಾಯನ ಮಾಡಿದ್ದರು.
(ಏಜನ್ಸೀಸ್)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications