ರೆಡ್ಡಿ ವಿರುದ್ಧ ಮಾನಹಾನಿ ಕೇಸ್ : ದಿವಾಕರ್ ಬಾಬು
ಬಳ್ಳಾರಿ, ಜೂ. 26 : ದಿವಾಕರ್ ಬಾಬು ಕುಟುಂಬ ಕೊಲೆಗಡುಕ ಕುಟುಂಬ ಎಂದು ಬಹಿರಂಗ ಹೇಳಿಕೆ ನೀಡಿರುವ ಸಚಿವ ಜನಾರ್ದನರೆಡ್ಡಿ ಹೇಳಿಕೆ ತೀವ್ರ ಆಕ್ಷೇಪ ಎತ್ತಿರುವ ಕಾಂಗ್ರೆಸ್ ನಾಯಕ ದಿವಾಕರ್ ಬಾಬು, ರೆಡ್ಡಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಆಧಾರದ ಮೇಲೆ ರೆಡ್ಡಿ ಕೊಲೆಗಡುಕ ಕುಟುಂಬ ಎಂದು ಆರೋಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ದಿವಾಕರ್ ಬಾಬು ಕುಟುಂಬ ಕೊಲೆಗಡುಕ ಕುಟುಂಬ. ಗಡಿ ಸರ್ವೆ ಸಂಬಂಧಿಸಿದಂತೆ ಉಪವಾಸ ನಡೆಸುತ್ತಿರುವುದು ಸ್ವಾರ್ಥ ಸಾಧನೆಗಾಗಿ ಎಂದು ಕಿಡಿಕಾರಿದ್ದರು.
ಪ್ರವಾಸೋದ್ಯಮ ಸಚಿವ ಜನಾರ್ಧನ ರೆಡ್ಡಿ ಒಬ್ಬ ಮಹಾನ್ ವಂಚಕ, ಎಲ್ಲರನ್ನೂ ಭೀತಿ ಹುಟ್ಟಿಸಿ ಕಾರ್ಯ ಸಾಧಿಸಿಕೊಳ್ಳುವ ವ್ಯಕ್ತಿ ಎಂದು ಮಾಜಿ ಕಾಂಗ್ರೆಸ್ ಸಚಿವ ದಿವಾಕರ ಬಾಬು ಆರೋಪಿಸಿದ್ದಾರೆ. ಗಡಿ ಸಮೀಕ್ಷೆಗೆ ಸಿದ್ದ ಎನ್ನುವ ರೆಡ್ಡಿಯ ಈ ಹೇಳಿಕೆಯ ಹಿಂದೆ ಏನೋ ಕುತಂತ್ರ ಅಡಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಇದೇ ರೆಡ್ಡಿ ಈ ಹಿಂದೆ ಸಮೀಕ್ಷೆಗೆ ಬಂದ ಸರ್ವೇ ಇಲಾಖೆಯ ಅಧಿಕಾರಿಗಳಿಗೆ ಯಾವ ರೀತಿ ಬೆದರಿಕೆ ಹಾಕಿ ಅವರು ವಾಪಸ್ ಹೋಗುವಂತೆ ಮಾಡಿದ್ದಾರೆನ್ನುವುದು ನಾಡಿನ ಜನತೆ ಗೊತ್ತಿರುವ ವಿಚಾರ. ಈಗ ತನ್ನ ನಿಲುವು ಬದಲಿಸಿ ಸರ್ವೇಗೆ ಸಿದ್ದ ಎಂದು ಹೇಳಿರುವುದು ನೋಡಿದರೆ ಏನೋ ಸಂಚು ಮಾಡಿರುವಂತಿದೆ. ಈ ರೆಡ್ಡಿಗೆ ತಾಕತ್ತಿದ್ದರೆ ಸರ್ವೇ ಎಲ್ಲರ ಸಮ್ಮುಖದಲ್ಲೇ ನಡೆಯುವ೦ತೆ ಮಾಡಲಿ ನೋಡೋಣ ಎಂದು ದಿವಾಕರ ಬಾಬು ಸವಾಲೆಸಿದಿದ್ದಾರೆ.
ಗಡಿ ವಿಚಾರದಲ್ಲಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಧಿವೇಶನದಲ್ಲಿ ಪಕ್ಷ ಈ ವಿಷಯವನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿ ಡಂಗುರ ಸಾರಿಕೊಂಡು ಬರುತ್ತಿದ್ದ ರೆಡ್ಡಿ ಈಗ ರಾಜಿಮಾಡಿಕೊಂಡಿರುದನ್ನು ನೋಡಿದರೆ, ಮುಖ್ಯಮಂತ್ರಿಗಳ ಕಾಲಿಗೆ ಬಿದ್ದು ತನಗೆ ಅನುಕೂಲವಾಗುವಂತೆ ಸರ್ವೇ ಮಾಡಿಸಿರಬಹುದು ಎಂದು ಬಾಬು ಕಿಡಿಕಾರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications