ತಮಿಳುನಾಡಿಗೆ ನೀರು ಬಿಡಲ್ಲ : ಯಡಿಯೂರಪ್ಪ
ಬೆಂಗಳೂರು, ಜೂ. 26 : ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀರಿನ ಸಂಗ್ರಹ ಕಡಿಮೆ ಇರುವುದರಿಂದ ರಾಜ್ಯದ ಹಿತಕ್ಕೆ ಮಾರಕವಾಗುವಂತಹ ತೀರ್ಮಾನ ಕೈಗೊಳ್ಳಲು ನಾವು ಸಿದ್ಧರಿಲ್ಲ ಎಂದರು. ಮುಂಗಾರು ಚುರುಕುಗೊಂಡು ಉತ್ತಮ ಮಳೆಯಾದರೆ ಎಂದಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು. ಆದರೆ, ಪ್ರಸ್ತುತ ನೀರಿನ ಸಂಗ್ರಹವಿಲ್ಲದೇ ಇರುವುದರಿಂದ ನೀರು ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು. ಕಾವೇರಿ ನೀರು ಬಿಡುವಂತೆ ತಮಿಳುನಾಡು ರಾಜ್ಯ ಸರಕಾರ ಪತ್ರ ಬರೆದಿಲ್ಲ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications